newsics.com
ಕೋಟ: ಭಾಗವತ ಸಂಪ್ರದಾಯಕ್ಕೆ ಸೇರಿದ ಪ್ರಾಚೀನ ಬಾಳೆಕುದ್ರು ಮಠದ ಹಿರಿಯ ಶ್ರೀ ನೃಸಿಂಹಾಶ್ರಮ ಸ್ವಾಮಿಜಿ (55) ಅಸೌಖ್ಯದಿಂದ ಜು.04 ರಂದು ಬೆಳಗ್ಗೆ ದೈವಾಧೀನರಾಗಿದ್ದಾರೆ.
ಕಿಡ್ನಿಗೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ತಿಂಗಳ ಹಿಂದೆ ಶಿಷ್ಯ ಸ್ವೀಕಾರ ನಡೆಸಿ ಮಠದಲ್ಲೇ ವಿಶ್ರಾಂತಿಯಲ್ಲಿದ್ದರು. ವಾರದಲ್ಲಿ ಎರಡು ಬಾರಿ ಡಯಾಲಿಸೀಸ್ ಚಿಕಿತ್ಸೆಗೆ ತೆರಳುತ್ತಿದ್ದ ಅವರು ಇಂದು ಬೆಳಗ್ಗೆ ಚಿಕಿತ್ಸೆಗೆ ತೆರಳುವ ಸಂದರ್ಭ ಅನಾರೋಗ್ಯ ಉಲ್ಬಣಗೊಂಡಿದ್ದು ಆಸ್ಪತ್ರೆ ತಲುಪುವಾಗ ವಿಧಿವಶರಾಗಿದ್ದಾರೆ.