newsics.com
ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜು.6ರಿಂದ ಜು.12ರವರೆಗೆ ಹಾಗೂ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮುಂದಿನ 2 ದಿನ ಬಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಕರಾವಳಿ ತಟ್ಟದ ಹತ್ತಿರ ಗಂಟೆಗೆ 55 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ, ಇಲಾಖೆ ಸೂಚಿಸಿದೆ. ಬೆಳಗಾವಿಯಲ್ಲಿ ಜು.6ರಂದು ಯೆಲ್ಲೋ ಅಲರ್ಟ್ ಇರಲಿದೆ.
ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರದಲ್ಲಿ ಮುಂದಿನ 4 ದಿನ ಮೋದ ಕವಿದ ವಾತಾವರಣದೊಂದಿಗೆ ಸಾಧಾರಣ ವರ್ಷಧಾರೆಯಾಗಲಿದೆ.
Bigg Boss Kannada Season 12ಬಿಗ್ ಬಾಸ್ ಶೋ ಗೋಸ್ಕರ ಈ 3 ಧಾರಾವಾಹಿಗಳು ಅಂತ್ಯ ಆಗುತ್ತೆ?