newsics.com
ಶಿವಮೊಗ್ಗ: ದೇಶದ ಎರಡನೇ ಅತಿ ಉದ್ದದ ಕೇಬಲ್ ಬ್ರಿಡ್ಜ್, ರಾಜ್ಯದ ಮೊದಲ ಕೇಬಲ್ ಆಧಾರಿತ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆಗೆ ಅಧಿಕೃತವಾಗಿ ದಿನಾಂಕ ನಿಗದಿಯಾಗಿದೆ. ಜುಲೈ 14ರಂದು ಸೇತುವೆ ಲೋಕಾರ್ಪಣೆಗೊಳ್ಳಲಿದೆ.
ಆದರೆ ಈ ಸ್ಥಳಕ್ಕೆ ಹೋಗಲು ಸೂಕ್ತ ರಸ್ತೆ ಸಂಪರ್ಕವಿರಲಿಲ್ಲ. ಹಾಗಾಗಿ ಈ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸಲು ಬೃಹತ್ ಸೇತುವೆ ನಿರ್ಮಾಣ ಮಾಡಲಾಗಿದೆ. ಇದರ ಉದ್ಘಾಟನೆಗೂ ದಿನಾಂಕ ನಿಗದಿಯಾಗಿದೆ.
ಈ ಬಗ್ಗೆ ಸ್ಥಳೀಯ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿದ್ದಾರೆ. ಸಿಗಂದೂರು ಸೇತುವೆ ದೇಶದ ಎರಡನೇ ಅತಿ ಉದ್ದದ ಸೇತುವೆ ಎನಿಸಿಕೊಳ್ಳಲಿದೆ ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಪ್ರಯತ್ನದಿಂದಾಗಿ 473 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ದೇಶದ 2ನೇ ಅತಿದೊಡ್ಡ ಸಾಗರ ತಾಲ್ಲೂಕಿನ ಹೊಳೆಬಾಗಿಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ ಸಮಾರಂಭವು ಇದೇ ಜುಲೈ 14ರಂದು ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರ ಉಪಸ್ಥಿತಿಯಲ್ಲಿ ನೆರವೇರಲಿದೆ ಎಂದಿದ್ದಾರೆ.