newsics.com
ಶಿವಮೊಗ್ಗ: ದೆವ್ವ ಬಿಡಿಸುವ ಕಾರ್ಯಕ್ಕೆ ಮುಂದಾದ ಮಹಿಳಾ ಮಂತ್ರವಾದಿಯೊಬ್ಬರು ಕೋಲಿನಿಂದ ಹೊಡೆದು ಮಹಿಳೆಗೆ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗೀತಾ (35) ಎಂಬ ಮಹಿಳೆ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ಜಂಬರಘಟ್ಟ ಗ್ರಾಮದಲ್ಲಿ ಗೀತಾ ಎಂಬ ಮಹಿಳೆಗೆ “ದೆವ್ವ ಹಿಡಿದಿದೆ” ಎಂದು ಮಹಿಳಾ ಮಂತ್ರವಾದಿಯೊಬ್ಬರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಗೀತಾಳಿಗೆ ದೆವ್ವ ಬಿಡಿಸುವ ಕಾರ್ಯಕ್ಕೆ ಮುಂದಾದ ಮಹಿಳೆ, ಆಚರಣೆಯ ಸಂದರ್ಭದಲ್ಲಿ ಕೋಲಿನಿಂದ ಗೀತಾಳನ್ನು ಹೊಡೆದಿದ್ದಾರೆ ಎನ್ನಲಾಗಿದೆ.
ಇದರ ವಿಡಿಯೋ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೀತಾ, ಈ ಹೊಡೆತದಿಂದಾಗಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಇಂದು ಬೆಳಿಗ್ಗೆ ಗೀತಾ ಚಿಕಿತ್ಸೆಗೆ ಸಿಗದೆ ಮೃತಪಟ್ಟಿದ್ದಾರೆ.
ದೆವ್ವ ಬಿಡಿಸುವ ಆಚರಣೆಯ ಸಂದರ್ಭದಲ್ಲಿ ನಡೆದ ಈ ದೌರ್ಜನ್ಯವೇ ಆಕೆಯ ಸಾವಿಗೆ ಕಾರಣವಾಯಿತು ಎಂದು ಆರೋಪಿಸಲಾಗಿದೆ. ಈ ಘಟನೆಯಿಂದ ಜಂಬರಘಟ್ಟ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.