newsics.com
ಪಾಟ್ನಾ: ವಾಮಾಚಾರದ ಆರೋಪದ ಮೇಲೆ ಒಂದೇ ಕುಟುಂಬದ ಐವರನ್ನು ಕ್ರೂರವಾಗಿ ಥಳಿಸಿ ನಂತರ ಸಜೀವ ದಹನ ಮಾಡಿರುವ ಘಟನೆ ಬಿಹಾರದ ಪೂರ್ಣಿಯಾ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಟೆಟ್ಗಾಮಾ ಗ್ರಾಮದಲ್ಲಿ ನಡೆದಿದೆ.
ಎಲ್ಲಾ ಆರೋಪಿಗಳು ಗ್ರಾಮದಿಂದ ಪರಾರಿಯಾಗಿದ್ದಾರೆ. ಪೊಲೀಸರು ಅವರಿಗಾಗಿ ಹುಡುಕುತ್ತಿದ್ದಾರೆ.
ಮೃತರನ್ನು ಬಾಬು ಲಾಲ್ ಒರಾನ್, ಸೀತಾ ದೇವಿ, ಮಂಜೀತ್ ಒರಾನ್, ರಾನಿಯಾ ದೇವಿ ಮತ್ತು ತಪ್ಟೋ ಮೊಸಾಮತ್ ಎಂದು ಗುರುತಿಸಲಾಗಿದ್ದು, ಎಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು. ಘಟನೆಯ ನಂತರ, ಆ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಅನೇಕ ಗ್ರಾಮಸ್ಥರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಪೊಲೀಸರು ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದಾರೆ ಮತ್ತು ಎಫ್ಎಸ್ಎಲ್ ತಂಡದೊಂದಿಗೆ ಶ್ವಾನ ದಳವು ತನಿಖೆ ನಡೆಸುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಕುಲ್ ಕುಮಾರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ