newsics.com
ಚಾಮರಾಜನಗರ: ಈ ಸೋಲಿಗ ಬಾಲಕಿಗೆ 12 ವರ್ಷ ವಯಸ್ಸು. ಸತತ ಪ್ರಯತ್ನದ ಬಳಿಕವೂ ಈಕೆಗೆ ಆಧಾರ್ ಕಾರ್ಡ್ ಸಿಗದ್ದರಿಂದ ನಿತ್ಯವೂ ಹಣ ಕೊಟ್ಟು ಬಸ್ನಲ್ಲಿ ಓಡಾಡುವ ದುಸ್ಥಿತಿ ನಿರ್ಮಾಣವಾಗಿದೆ.
ಆಧಾರ್ ಕಾರ್ಡ್ ಸಿಗದ್ದರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಉಚಿತ ಬಸ್ ಪ್ರಯಾಣ, ಬ್ಯಾಂಕ್ ಖಾತೆ ತೆರೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಯಾವುದೇ ಸರ್ಕಾರಿ ಸವಲತ್ತು ಸಿಕ್ತಿಲ್ಲ.
ಶಾಲೆಗೆ ಹೋಗಲೂ ನಿತ್ಯ 30 ರೂ. ಬಸ್ ಚಾರ್ಜ್ ಕೊಟ್ಟು ಓಡಾಡಬೇಕಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌಳೇಹಳ್ಳ ಡ್ಯಾಂ ನಿವಾಸಿ ಎಸ್ ಚೈತ್ರ ದುಸ್ಥಿತಿಯಿದು. ಬಾಲಕಿ ಚೈತ್ರಾ ಲೊಕ್ಕನಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ನಿತ್ಯವೂ ಶಾಲೆಗೆ ಕೌಳೇಹಳ್ಳದಿಂದ ಲೊಕ್ಕನಹಳ್ಳಿಗೆ ಸಂಚರಿಸಬೇಕಿದೆ. ಇದಕ್ಕಾಗಿ ನಿತ್ಯ 30 ರೂಪಾಯಿ ಖರ್ಚು ಮಾಡುವ ಪರಿಸ್ಥಿತಿ ಇದೆ.
ಪುಟ್ಟ ಹೆಣ್ಣು ಮಗುವಿನಿಂದ ಹಿಡಿದು ಎಲ್ಲಾ ವಯಸ್ಸಿನ ಮಹಿಳೆಯರಿಗೂ ಶಕ್ತಿ ಯೋಜನೆಯಲ್ಲಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಇದೆ. ಆದರೆ ಈ ಸೋಲಿಗ ಬಾಲಕಿಗೆ ಮಾತ್ರ ಉಚಿತ ಪ್ರಯಾಣದ ಭಾಗ್ಯವಿಲ್ಲ. ಪ್ರತಿದಿನವೂ 30 ರೂಪಾಯಿ ಬಸ್ ಚಾರ್ಜ್ ತೆತ್ತು ಶಾಲೆಗೆ ಹೋಗಿಬರುವ ಪರಿಸ್ಥಿತಿ ಇದೆ. ಮೊದಲೇ ಬಡ ವಿದ್ಯಾರ್ಥಿ. ಉಚಿತ ಸೌಲಭ್ಯದಿಂದ ವಂಚಿತವಾಗಿದ್ದೇನೆ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.
ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಖಾತೆ, ಬಸ್ ಪ್ರಯಾಣ ಎಲ್ಲದಕ್ಕೂ ಆಧಾರ್ ಕಾರ್ಡ್ ಬೇಕೇಬೇಕು. ಆದರೆ ಆಧಾರ್ ಕಾರ್ಡ್ ಇಲ್ಲದೆ ಎಲ್ಲ ಸೌಲಭ್ಯಗಳಿಂದ ವಂಚಿತಳಾಗಿದ್ದಾಳೆ.
ಮನೆಯಲ್ಲಿ ಹುಟ್ಟಿದ್ದೇ ತಪ್ಪಾಯ್ತು:
ಈ ಬಾಲಕಿ ಚೈತ್ರಾ ಮನೆಯಲ್ಲೇ ಜನಿಸಿದ್ದರಿಂದ ಬರ್ತ್ ಸರ್ಟಿಫಿಕೇಟ್ ಸಿಕ್ಕಿಲ್ಲ. ಬರ್ತ್ ಸರ್ಟಿಫಿಕೇಟ್ ಇಲ್ಲದೆ ಆಧಾರ್ ಕಾರ್ಡ್ ಕೊಡ್ತಿಲ್ಲ. ತಂದೆ ಬದುಕಿಲ್ಲ, ತಾಯಿ ಮಹದೇವಮ್ಮ ಕೂಲಿ ಕೆಲಸ ಮಾಡ್ತಿದ್ದಾಳೆ. ನಿತ್ಯ ಕೂಲಿ ಮಾಡಿ ಮಗಳಿಗೆ ಬಸ್ ಚಾರ್ಜ್ ಕೊಟ್ಟು ಕಳಿಸಬೇಕಾಗಿದೆ. ಕೂಡಲೇ ಆಧಾರ್ ಕಾರ್ಡ್ ಸೌಲಭ್ಯ ಕಲ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
Ramayana ravana ರಾಮಾಯಣದಲ್ಲಿ ರಾವಣನಾಗಿ ಯಶ್ ಕಾಣಿಸಿಕೊಳ್ಳೋದೆಷ್ಟು ಸಮಯ? ಸಂಭಾವನೆ ಎಷ್ಟು? ಗಾಬರಿಯಾಗದಿರಿ…