newsics.com
ನಾಳೆ ಭಾರತ್ ಬಂದ್ಗೆ 10 ಸೆಂಟ್ರಲ್ ಟ್ರೇಡ್ ಯೂನಿಯನ್ಗಳು ಕರೆ ನೀಡಿವೆ. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಭಾರತ್ ಬಂದ್ಗೆ ಕರೆ ನೀಡಲಾಗಿದೆ. ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ, ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತ್ ಬಂದ್ಗೆ ಕರೆ ನೀಡಲಾಗಿದೆ.
ನಾಳಿನ ದೊಡ್ಡ ಪ್ರಮಾಣದ ಪ್ರತಿಭಟನೆಯಿಂದ ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ, ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ವ್ಯಾಪಕ ಅಡಚಣೆಯಾಗುವ ನಿರೀಕ್ಷೆಯಿದೆ. ಈ ಮುಷ್ಕರವು ದೇಶದ ಆರ್ಥಿಕ ಚಟುವಟಿಕೆಗಳ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ.
ಜುಲೈ 9ರಂದು ರೈಲ್ವೆ ಸೇವೆಗಳಿಗೆ ದೇಶವ್ಯಾಪಿ ಮುಷ್ಕರದ ಘೋಷಣೆ ಇಲ್ಲ. ಆದರೆ, ದೊಡ್ಡ ಪ್ರಮಾಣದ ಪ್ರತಿಭಟನೆಗಳು ಮತ್ತು ರಸ್ತೆ ತಡೆ ಕಾರ್ಯಕ್ರಮಗಳಿಂದ ಕೆಲವು ಪ್ರದೇಶಗಳಲ್ಲಿ ರೈಲು ಸೇವೆಗಳು ವಿಳಂಬ ಅಥವಾ ವ್ಯತ್ಯಯಕ್ಕೊಳಗಾಗಬಹುದು. ರೈಲ್ವೆ ಸಂಘಗಳು ಈ ಬಂದ್ಗೆ ಔಪಚಾರಿಕವಾಗಿ ಸೇರಿಲ್ಲವಾದರೂ, ಕಳೆದ ಬಂದ್ಗಳಲ್ಲಿ ಕೆಲವು ರಾಜ್ಯಗಳಲ್ಲಿ ಪ್ರತಿಭಟನಾಕಾರರು ರೈಲ್ವೆ ನಿಲ್ದಾಣಗಳ ಬಳಿ ಅಥವಾ ಟ್ರ್ಯಾಕ್ಗಳ ಮೇಲೆ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಸ್ಥಳೀಯವಾಗಿ ರೈಲು ಸೇವೆಗಳ ವಿಳಂಬ ಸಾಧ್ಯತೆಯಿದೆ. ಪ್ರಮುಖ ರೈಲ್ವೆ ಕೇಂದ್ರಗಳ ಸುತ್ತ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗುವ ಸಾಧ್ಯತೆಯಿದ್ದು, ಪ್ರಯಾಣಿಕರಿಗೆ ರೈಲು ವೇಳಾಪಟ್ಟಿಯನ್ನು ಪರಿಶೀಲಿಸಿ ಪ್ರಯಾಣ ಯೋಜನೆ ಮಾಡಿಕೊಳ್ಳಲು ಸೂಚಿಸಲಾಗಿದೆ.
ಟ್ರೇಡ್ ಯೂನಿಯನ್ಗಳು ತಮ್ಮ ಬೇಡಿಕೆಯನ್ನು ಕೇಂದ್ರ ಸರ್ಕಾರ ನಿರಂತರವಾಗಿ ನಿರ್ಲಕ್ಷ್ಯ ಮಾಡಿವೆ ಎಂದು ಹೇಳಿವೆ. ಕಳೆದ ವರ್ಷವೇ ಕೇಂದ್ರದ ಕಾರ್ಮಿಕ ಸಚಿವ ಮನಸುಖ್ ಮಾಂಡವೀಯಾಗೆ 17 ಪಾಯಿಂಟ್ಗಳ ಚಾರ್ಟರ್ ಬೇಡಿಕೆಯನ್ನು ಸಲ್ಲಿಸಿದ್ದೇವು. ಇದರ ಬಗ್ಗೆ ಯಾವುದೇ ಗಂಭೀರ ಪ್ರತಿಕ್ರಿಯೆಯನ್ನು ಕೇಂದ್ರ ಸರ್ಕಾರ ನೀಡಿಲ್ಲ. ದೇಶದ ಕಲ್ಯಾಣ ರಾಜ್ಯದ ಸ್ಥಾನಮಾನವನ್ನ ಕೇಂದ್ರ ಸರ್ಕಾರ ಕೈಬಿಟ್ಟಿದೆ. ಕೇಂದ್ರ ಸರ್ಕಾರ ಬರೀ ವಿದೇಶಿ, ಭಾರತೀಯ ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿ ರಕ್ಷಣೆಗಾಗಿ ಕೆಲಸ ಮಾಡುತ್ತಿದೆ