newsics.com
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು ತಾರಕ್ಕೇರಿರುವ ನಡುವಲ್ಲೇ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿಗೆ ಕಾದು ಕುಳಿತು ಅವಕಾಶ ಸಿಗದೇ ಬೆಂಗಳೂರಿಗೆ ಮರಳಿದ್ದಾರೆ.
ಡಿಕೆ ಶಿವಕುಮಾರ್ ಅವರು ಜುಲೈ 8 ಮಂಗಳವಾರ ದೆಹಲಿಗೆ ತೆರಳಿದ್ದರು.
ಗುರುವಾರ ಡಿಕೆಶಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ಪ್ರಯತ್ನಿಸಿದ್ದರು. ಭೇಟಿಗೆ ಅವಕಾಶ ಸಿಗಬಹುದು ಎಂಬ ಕಾರಣಕ್ಕೆ ಎರಡು ಬಾರಿ ಡಿಕೆಶಿ ವಿಮಾನ ಟಿಕೆಟ್ ಕ್ಯಾನ್ಸಲ್ ಮಾಡಿದ್ದರು.
ಇಂದು ರಾಹುಲ್ ಗಾಂಧಿ ಒಡಿಶಾಕ್ಕೆ ತೆರಳಿದ್ದರಿಂದ ಡಿಕೆಶಿ ಪ್ರಿಯಾಂಕಾ ವಾದ್ರಾ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದರು. ಆದರೆ ಪ್ರಿಯಾಂಕಾ ಭೇಟಿ ಸಿಗದ ಕಾರಣ ಡಿಕೆಶಿ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ ಆಗಿದ್ದಾರೆ