newsics.com
ಸಮುದ್ರ ಮೇಲ್ಮೈ ಹಾಗೂ ಉತ್ತರ ಭಾರತದ ಭೂಮಿ ಮೇಲ್ಮೈನಲ್ಲಿ ಉಂಟಾದ ವಾಯುಭಾರ ಕುಸಿತ, ಚಂಡಮಾರುತ ಪ್ರಸರಣದಿಂದಾಗಿ ವಿವಿಧೆಡೆ ಭಾರೀ ಮಳೆ ಆರ್ಭಟ ಕಂಡು ಬರಲಿದೆ.ಮಧ್ಯಪ್ರದೇಶ, ಉತ್ತರಾಖಂಡದಿಂದ ಹಿಡಿದು ಕೇರಳ, ಕರ್ನಾಟಕದ ತನಕ ಧಾರಾಕಾರ ಮಳೆ ಸುರಿಯುತ್ತಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಗಾಳಿ ಸಹಿತ ಹೆಚ್ಚಿನ ಮಳೆ ಹಿನ್ನೆಲೆ ಈ ಜಿಲ್ಲೆಗಳಲ್ಲಿ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜು 14ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಹಿಮಾಚಲ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಈ ಪ್ರದೇಶಗಳಲ್ಲಿ ಮಳೆ ಎಚ್ಚರಿಕೆ ನೀಡಿದೆ . ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪಂಜಾಬ್ ಮತ್ತು ಹರಿಯಾಣದಲ್ಲಿ ಇಂದು ಯಾವುದೇ ಮಳೆ ಎಚ್ಚರಿಕೆ ಇಲ್ಲ. ಆದರೆ, ಉತ್ತರಾಖಂಡ, ಗುಜರಾತ್, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಇಂದು ಮಳೆ ಮತ್ತು ಮಿಂಚಿನ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಹವಾಮಾನ ಇಲಾಖೆ ಆರೆಂಜ್ ಎಚ್ಚರಿಕೆ ನೀಡಿದೆ