newsics.com
ರಾಮನಗರ: ತಡೆಗೋಡೆಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಟು ಮೈಸೂರು ಎಕ್ಸ್ಪ್ರೆಸ್ ವೇನ ರಾಮನಗರ ತಾಲೂಕಿನ ಜಯಪುರಗೇಟ್ ಬಳಿ ನಡೆದಿದೆ.
ಮೃತರ ಗುರುತು ಪತ್ತೆ ಆಗಿಲ್ಲ. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ತಡೆಗೋಡೆಗೆ ಡಿಕ್ಕೆ ಹೊಡೆದು ಅಪಘಾತ ಸಂಭವಿಸಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
https://www.newsics.com/2025/07/13/veteran-multilingual-actor-kota-srinivasa-rao-passes-away/