newsics.com
ಬೆಂಗಳೂರು : ‘ಶಕ್ತಿ’ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿರುವ ಹಿನ್ನೆಲೆಯಲ್ಲಿ ಇಂದು ಈ ಯೋಜನೆಯ ವಿಶಿಷ್ಟ ಟಿಕೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಣೆ ಮಾಡಲಿದ್ದಾರೆ.
ಬೆಂಗಳೂರಿನ ಕುಮಾರಪಾರ್ಕ್ ಈಸ್ಟ್ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು 500ನೇ ಕೋಟಿ ಟಿಕೆಟ್ ಅನ್ನು ಸಾಂಕೇತಿಕವಾಗಿ ವಿತರಣೆ ಮಾಡುವರು.
2023 ರ ಜೂನ್ 11 ರಂದು ಜಾರಿಗೆ ಬಂದ ಶಕ್ತಿ ಯೋಜನೆಯು ಇದೆ ಜುಲೈ 14 ಅಂದರೆ ಇಂದಿಗೆ 500 ಕೋಟಿ ಉಚಿತ ಪ್ರಯಾಣವನ್ನು ಸಾಧಿಸಲಿದ್ದು, ಈ ಹಿನ್ನಲೆ ಈ ಐತಿಹಾಸಿಕ ಕ್ಷಣವನ್ನು ವಿಶೇಷವಾಗಿ ಆಚರಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಈ ಹಿನ್ನಲೆ ಸಿಎಂ ಸಿದ್ದರಾಮಯ್ಯ ಅವರು ಇಂದು ಕುಮಾರಕೃಪಾ ರಸ್ತೆಯ ವಿಂಡ್ಸರ್ ವೃತ್ತದ ಬಳಿ ಬಿಎಂಟಿಸಿ ಬಸ್ ನಲ್ಲಿ ಕಂಡಕ್ಟರ್ ಆಗಿ ಟಿಕೆಟ್ ವಿತರಣೆ ಮಾಡಲಿದ್ದಾರೆ. ಈ ಮೂಲಕ ಶಕ್ತಿಯೋಜನೆಯ ಸಂಭ್ರಮಾಚರಣೆಯಲ್ಲಿ ಭಾಗವಹಿಸಲಿದ್ದಾರೆ.
Drug’s case ಡ್ರಗ್ಸ್ ಮಾರಾಟ ಕೇಸ್; ಕಲಬುರಗಿ ಕಾಂಗ್ರೆಸ್ ಮುಖಂಡ ಮಹಾರಾಷ್ಟ್ರದಲ್ಲಿ ಅರೆಸ್ಟ್