newsics.com
ಬಹುಭಾಷಾ ನಟಿ ಬಿ. ಸರೋಜಾ ದೇವಿ ಸೋಮವಾರದಂದು ತಮ್ಮ 87ರ ಹರೆಯದಲ್ಲಿ ಇಹಲೋಕ ತ್ಯಜಿಸಿದ್ದು, ಇಂದು ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತಿಮ ವಿಧಿ-ವಿಧಾನಗಳು ನಡೆಯಿತು. ಸಿಎಂ ಸಿದ್ದರಾಮಯ್ಯ ಅವರಿಂದು ನಟಿಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.
ಕಳೆದ ದಿನ ನಟಿಯ ಬೆಂಗಳೂರು ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅನೇಕ ಸಿನಿಮಾ ಗಣ್ಯರು, ರಾಜಕೀಯ ಮುಖಂಡರು ಆಗಮಿಸಿ, ಅಂತಿಮ ನಮನ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದಲೇ ಸರೋಜಾ ದೇವಿ ಅವರ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿತ್ತು.
ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘‘ಬಿ.ಸರೋಜಾ ದೇವಿ ಅವರ ನಿಧನ ಇಡೀ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟುಮಾಡಿದೆ. ಬಹಳ ಚಿಕ್ಕ ವಯಸ್ಸಿನಲ್ಲೇ ಸಿನಿರಂಗ ಪ್ರವೇಶ ಮಾಡಿ, 6 ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಅಭಿನಯ ಸರಸ್ವತಿ ಅಂತಾ ಬಿರುದು ಕೊಡಲಾಗಿತ್ತು. ಅವರೋರ್ವ ಮೇರು ನಟಿಯಾಗಿ ಗುರುತಿಸಿಕೊಂಡವರು. ತಮ್ಮ ಎಲ್ಲಾ ಪಾತ್ರಕ್ಕೂ ಅತ್ಯುತ್ತಮವಾಗಿ ಜೀವ ತುಂಬುತ್ತಿದ್ರು. ಖಾಸಗಿ ಜೀವನದಲ್ಲೂ ಶಿಸ್ತುಬದ್ಧರಾಗಿದ್ದರು’ ಎಂದಿದ್ದಾರೆ.
ಇನ್ನು ಮಲ್ಲೇಶ್ವರಂ 11ನೇ ಕ್ರಾಸ್ಗೆ ಬಿ.ಸರೋಜಾ ದೇವಿ ಹೆಸರು ಇಡುವ ಬಗ್ಗೆ ಮಾಧ್ಯಮದವರಿಂದ ಇದೇ ವೇಳೆ ಪ್ರಶ್ನೆ ಎದುರಾದಾಗ, ”ನೋಡೋಣ, ಈ ವಿಚಾರವಾಗಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗುತ್ತದೆ” ಎಂದು ತಿಳಿಸಿದರು.
Chaitra Kundapur: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಚೈತ್ರಾ ಕುಂದಾಪುರ ಆಕ್ರೋಶ