newsics.com
ಉತ್ತರಾಖಂಡ: 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೊ ಕಂದಕಕ್ಕೆ ಉರುಳಿ 8 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಪಿಥೋರಗಢ ಜಿಲ್ಲೆಯ ಮುವಾನಿ ಪಟ್ಟಣದ ಸುನಿ ಸೇತುವೆ ಬಳಿ ನಡೆದಿದೆ
ಇತರ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜೀವಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಮ್ಮ ಸಂತಾಪ ಸೂಚಿಸಿದ್ದಾರೆ. ಪರಿಹಾರ ಪ್ರಯತ್ನಗಳನ್ನು ವೇಗಗೊಳಿಸಲು ಮತ್ತು ಎಲ್ಲಾ ಗಾಯಾಳುಗಳಿಗೆ ಸಕಾಲಿಕ ಮತ್ತು ಉಚಿತ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಅವರು ಜಿಲ್ಲಾ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳಿಗೆ ನಿರ್ದೇಶನ ನೀಡಿದ್ದಾರೆ.
General Knowledge: ಈ ದೇಶದಲ್ಲಿ ದಪ್ಪ ಇದ್ರೆ ಶಿಕ್ಷೆ ಫಿಕ್ಸ್! ಏನಿದು ವಿಚಿತ್ರ ಕಾನೂನು?