Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇರಳ ನರ್ಸ್‌ಗೆ ಕ್ಷಮೆಯಿಲ್ಲ: ಯೆಮೆನ್ನಲ್ಲಿ ನಿಮಿಷಾ ಪ್ರಿಯಾಳ ಗಲ್ಲಿಗೇರಿಸಲು ಕೆಲವೇ ನಿಮಿಷಗಳು ಬಾಕಿ!
ದೇಶಪ್ರಮುಖ

ಕೇರಳ ನರ್ಸ್‌ಗೆ ಕ್ಷಮೆಯಿಲ್ಲ: ಯೆಮೆನ್ನಲ್ಲಿ ನಿಮಿಷಾ ಪ್ರಿಯಾಳ ಗಲ್ಲಿಗೇರಿಸಲು ಕೆಲವೇ ನಿಮಿಷಗಳು ಬಾಕಿ!

Share
2 Min Read
SHARE

newsics.com

ನವದೆಹಲಿ: ಕೇರಳ ಮೂಲದ ನರ್ಸ್‌ ನಿಮಿಷಾ ಪ್ರಿಯಾ ಅಪರಾಧ ಮಾಡಿದ್ದಾರೆ. ಹೀಗಾಗಿ ಅವರು ಮಾಡಿರುವ ಅಪರಾಧಕ್ಕೆ ಯಾವುದೇ ವಿನಾಯ್ತಿ ನೀಡಬಾರದು. ನಮಗೆ ಯಾವುದೇ ಮಧ್ಯಸ್ಥಿಕೆ ಬೇಕಿಲ್ಲ ಎಂದು ನಿಮಿಷ ಪ್ರಿಯಾರಿಂದ ಹತ್ಯೆಗೀಡಾದ ಯೆಮೆನ್‌ನ ತಲಾಲ್‌ ಅಬ್ದೋ ಮೆಹ್ದಿ ಸೋದರ ಅಬ್ದೆಲ್‌ಫತಾ ಮೆಹ್ದಿ ಹೇಳಿದ್ದಾರೆ.

2017ರಲ್ಲಿ ನಡೆದಿದ್ದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿಮಿಷಾ ಪ್ರಿಯಾಗೆ ಜು.16ರಂದು ಗಲ್ಲುಶಿಕ್ಷೆ ವಿಧಿಸಬೇಕಿತ್ತು. ಆದರೆ, ಕೇಂದ್ರ ಸರ್ಕಾರ ಮತ್ತು ಕೇರಳದ ಕಾಂತಾಪುರಂನ ಗ್ರ್ಯಾಂಡ್‌ ಮುಫ್ತಿ ಎ.ಪಿ.ಅಬೂಬಕರ್‌ ಮುಸ್ಲಿಯಾರ್, ಇತರರ ಮಧ್ಯಪ್ರವೇಶದಿಂದಾಗಿ ಸದ್ಯಕ್ಕೆ ನಿಮಿಷಾ ಪ್ರಿಯಾಗೆ ವಿಧಿಸಿರುವ ಗಲ್ಲು ಶಿಕ್ಷೆ ಮುಂದೂಡಲಾಗಿದೆ. ಇದರ ಬೆನ್ನಲ್ಲೇ ಹತ್ಯೆಗೀಡಾದ ಅಬ್ದೋ ಮೆಹ್ದಿ ಸೋದರನ ಈ ಹೇಳಿಕೆ ನಿಮಿಷ ಪ್ರಿಯಾಗೆ ಕ್ಷಮಾದಾನ ಕೊಡಿಸುವ ಪ್ರಯತ್ನಕ್ಕೆ ಕೊಂಚ ಹಿನ್ನಡೆಯುಂಟು ಮಾಡಿದಂತಾಗಿದೆ.

ಸೋಷಿಯಲ್‌ ಮೀಡಿಯಾದಲ್ಲಿ ಪ್ರಕಟಿಸುತ್ತಿರುವ ಸುದ್ದಿ ಕುರಿತು ಅಬ್ದೆಲ್‌ಫತಾ ಮೆಹ್ದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಗಲ್ಲು ವಿಳಂಬದಿಂದ ನಮಗೆ ಆಘಾತವಾಗಿದೆ. ನಮಗೆ ಯಾವುದೇ ಮಧ್ಯಸ್ಥಿಕೆ ಬೇಕಿಲ್ಲ. ನಿಮಿಷ ಪ್ರಿಯಾಗೆ ಯಾವುದೇ ಕಾರಣಕ್ಕೂ ಕ್ಷಮಾದಾನ ನೀಡಬಾರದು, ಆಕೆಯನ್ನು ಗಲ್ಲಿಗೇರಿಸಬೇಕು. ಆಕೆಯನ್ನು ಸಂತ್ರಸ್ತೆ ಎಂದು ಬಿಂಬಿಸುವುದು ತಪ್ಪು. ನಮಗೆ ನ್ಯಾಯ ಮಾತ್ರ ಬೇಕು.’ ಎಂದು ಆಗ್ರಹಿಸಿದ್ದಾರೆ.

ಸರ್ವ ಪ್ರಯತ್ನ: ಸೌದಿ ಅರೇಬಿಯಾದಲ್ಲಿರುವ ಏಜೆನ್ಸಿಗಳು, ಭಾರತ ಸರ್ಕಾರ, ಕೇರಳದ ಮೌಲ್ವಿ ಸೇರಿ ಹಲವರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ನಿಮಿಷಾ ಪ್ರಿಯಾಗೆ ವಿಧಿಸಲಾಗಿರುವ ಗಲ್ಲುಶಿಕ್ಷೆ ತಡೆಯಲು ಯತ್ನಿಸುತ್ತಿದ್ದಾರೆ. ಕೇರಳದ ಸಿಪಿಎಂ ಕಾರ್ಯದರ್ಶಿ ಎಂ.ವಿ.ಗೋವಿಂದನ್‌ ಅವರು ಕಾಂತಾಪುರಂನ ಗ್ರ್ಯಾಂಡ್ ಮುಫ್ತಿ ಎ.ಪಿ.ಅಬೂಬಕರ್‌ ಮುಸ್ಲಿಯಾರ್‌ ಜತೆಗೆ ಬುಧವಾರ ಮಾತುಕತೆ ನಡೆಸಿದ್ದಾರೆ. ಮುಸ್ಲಿಯಾರ್‌ ಅವರು ಯೆಮೆನ್‌ನ ಶೂರಾ ಕೌನ್ಸಿಲ್‌ (ಬುಡಕಟ್ಟು ಕೌನ್ಸಿಲ್‌) ನಲ್ಲಿರುವ ಗೆಳೆಯನಿಗೆ ನಿಮಿಷಪ್ರಿಯಾ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಲು ಮನವಿ ಮಾಡಿದ್ದಾರೆ.

ಬ್ಲಡ್ ಮನಿ ಪಡೆಯಲು ಭಿನ್ನಾಭಿಪ್ರಾಯ: ಈ ನಡುವೆ, ಕೇರಳದ ಶ್ರೀಮಂತ ಉದ್ಯಮಿ ಎಂ.ಎ.ಯೂಸುಫ್‌ ಆಲಿ ಅವರು ನಿಮಿಷ ಪ್ರಿಯಾಗೆ ಕ್ಷಮಾದಾನ ಕೊಡಿಸಲು ಆರ್ಥಿಕವಾಗಿ ನೆರವು ನೀಡುವ ಭರವಸೆ ನೀಡಿದ್ದಾರೆ. ಆದರೆ, ಬ್ಲಡ್‌ ಮನಿ ಅಂದರೆ ಕ್ಷಮಾದಾನಕ್ಕೆ ಪರ್ಯಾಯವಾಗಿ ಹಣ ಪಡೆಯುವ ವಿಚಾರವಾಗಿ ಮೆಹ್ದಿ ಕುಟುಂಬ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಹಣದ ವಿಚಾರದಲ್ಲಿ ಅವರ ಕುಟುಂಬದ ನಡುವೆಯೇ ಭಿನ್ನಾಭಿಪ್ರಾಯಗಳಿವೆ ಎನ್ನಲಾಗಿದೆ. ಈ ಕುರಿತು ಅವರ ಮನವೊಲಿಕೆಗೆ ಮಾತುಕತೆ ಮುಂದುವರಿದಿದೆ.

Rain alerts ಮುಂದುವರೆದ ಮಳೆ ಅಬ್ಬರ: ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

TAGGED:No mercy for Kerala nurse: Only minutes left for Nimisha Priya to be hanged in Yemen!
Share This Article
Facebook Twitter Copy Link Print
Previous Article Rain alerts ಮುಂದುವರೆದ ಮಳೆ ಅಬ್ಬರ: ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ
Next Article 5 ವರ್ಷದ ಮಗಳ ಹತ್ಯೆಗೈದು ಶವದ ಪಕ್ಕದಲ್ಲೇ ಪ್ರಿಯಕರನ ಜೊತೆ ಸೇರಿ ಹೆತ್ತತಾಯಿ ಮಾಡಿದ್ದೇನು?

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?