newsics.com
ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ (ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಜೀವ ಕಳೆದುಕೊಂಡಿದ್ದಾರೆ.ಈ ಘಟನೆಗೆ ಸಂಬಂಧಿಸಿದಂತೆಸರ್ಕಾರ ಹೈಕೋರ್ಟ್ಗೆ ತನ್ನ ತನಿಖಾ ವರದಿಯನ್ನು ಸಲ್ಲಿಸಿದೆ.
ಸರ್ಕಾರದ ವಾದದ ಪ್ರಕಾರ, ಅಂದು ಪೊಲೀಸರು ಸಾರ್ವಜನಿಕರ ಸುರಕ್ಷತೆಗಿಂತ ಹೆಚ್ಚಾಗಿ ಆರ್ಸಿಬಿ ತಂಡದ ಕಾರ್ಯಕ್ರಮಕ್ಕೆ ಆದ್ಯತೆ ನೀಡಿದ್ದರು. ಅಡ್ವೊಕೇಟ್ ಜನರಲ್ ಶೆಟ್ಟಿ ಅವರು ನ್ಯಾಯಾಲಯದಲ್ಲಿ ಹೇಳಿದ್ದೇನು ಎಂಬುದನ್ನು ಗಮನಿಸಿ:
ಅಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಫೈನಲ್ ಪಂದ್ಯದ ಟಾಸ್ ಆಗುವುದಕ್ಕಿಂತ ಮುಂಚೆಯೇ, ಒಂದು ವೇಳೆ ಆರ್ಸಿಬಿ ಗೆದ್ದರೆ ವಿಜಯೋತ್ಸವ ಆಚರಿಸುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಆರ್ಸಿಬಿ ಕಡೆಯಿಂದ ಅರ್ಜಿ ಬಂದಿತ್ತು. ನಮ್ಮ ಪೊಲೀಸ್ ಅಧಿಕಾರಿಗಳು ಆ ಅರ್ಜಿಯನ್ನು ಪರಿಶೀಲಿಸಿ, ಜನದಟ್ಟಣೆಯನ್ನು ಅಂದಾಜಿಸಿ, ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವ ಬದಲು, ಆರ್ಸಿಬಿಯ ಸೇವಕರಂತೆ ವರ್ತಿಸಿದರು,” ಎಂದು ಸರ್ಕಾರ ನೇರವಾಗಿ ಆರೋಪಿಸಿದೆ.
ಪಂದ್ಯ ಆರಂಭವಾಗುವ ಮೊದಲೇ ವಿಜಯೋತ್ಸವದ ಬಗ್ಗೆ ಯೋಜನೆ ರೂಪಿಸಿ, ಅದಕ್ಕೆ ಪೊಲೀಸರು ಯಾವುದೇ ಅಡ್ಡಿಪಡಿಸದೆ ಸಹಕರಿಸಿದ್ದು ದೊಡ್ಡ ಕರ್ತವ್ಯ ಲೋಪ. ಈ ಅಸಡ್ಡೆಯೇ ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಸರ್ಕಾರ ಆರೋಪಿಸಿದೆ.