newsics.com
ಹಾಸನ : ಶಿಕ್ಷಕಿಯೊಬ್ಬರು 1ನೇ ತರಗತಿಯ ಪುಟ್ಟ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದ ಖಾಸಗಿ ಶಾಲೆಯಲ್ಲಿ ನಡೆದಿದೆ. ಒಂದನೇ ತರಗತಿ ಓದುತ್ತಿರುವ ದಿವಾಕರ್ಗೌಡ ಎಂಬ ವಿದ್ಯಾರ್ಥಿಗೆ ಶಿಕ್ಷಕಿ ರಜನಿ ಹೊಡೆದಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಬಾಲಕನಿಗೆ ಹೊಡೆದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಶಿಕ್ಷಕಿ ಹೊಡೆದ ಏಟಿಗೆ ಬಾಲಕ ಆಸ್ಪತ್ರೆ ಸೇರುವಂತಾಗಿದೆ.
ಬಾಲಕನ ತಂದೆ ರಂಗಸ್ವಾಮಿ ಮತ್ತು ತಾಯಿ ಕಾವ್ಯ ಎಂಬುವರು ಕೂಲಿ ಕೆಲಸ ಮಾಡುತ್ತಾ ಜೀವನ ಸಾಗಿಸಿದ್ರು. ಮಗ ಚೆನ್ನಾಗಿ ಓದಲಿ ಅಂತ ಮಡಬಲು ಗ್ರಾಮದ ದಂಪತಿ ಖಾಸಗಿ ಶಾಲೆಗೆ ಸೇರಿದ್ರು. ಆದ್ರೆ ಶಿಕ್ಷಕಿ ಮಗನಿಗೆ ಬಾಸುಂಡೆ ಬರುವಂತೆ ಹೊಡೆದಿರುವುದನ್ನು ಕಂಡು ಪೋಷಕರು ಶಿಕ್ಷಕಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಈ ಘಟನೆ ಕುರಿತು ಗಾಯಾಳು ಬಾಲಕನ ಪೋಷಕರು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.