newsics.comದರ್ಶನ್ ಅವರು ‘ಡೆವಿಲ್’ ಸಿನಿಮಾದ ಹಾಡಿನ ಶೂಟ್ಗಾಗಿ ಥೈಲ್ಯಾಂಡ್ಗೆ ತೆರಳಿದ್ದಾರೆ. ಅಲ್ಲಿ ಅವರು ಶೂಟಿಂಗ್ ಮಧ್ಯೆ ಅವರು ಎಂಜಾಯ್ಮೆಂಟ್ ಕೂಡ ಮಾಡುತ್ತಿದ್ದಾರೆ. ದರ್ಶನ್ ಅವರು ಯಾಚ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ರಾಜ್ಯ ಪೊಲೀಸ್ ಇಲಾಖೆಯ ಅರ್ಜಿಯ ವಿಚಾರಣೆಯನ್ನ ನಿನ್ನೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯಿತು. ಜಸ್ಟೀಸ್ ಜೆ.ಬಿ.ಪರ್ದಿವಾಲಾ ಅವರ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಸಿತು . ಜಾಮೀನು ನೀಡುವಾಗ ಹೈಕೋರ್ಟ್ ತನ್ನ ವಿವೇಚನೆಯನ್ನು ಸೂಕ್ತವಾಗಿ ಬಳಸಿಲ್ಲ ಎಂದು ನ್ಯಾ. ಪರ್ದಿವಾಲಾ ಆಕ್ಷೇಪಿಸಿದ್ದರು.ಹೈಕೋರ್ಟ್ ತೀರ್ಪಿನ ಬಗ್ಗೆ ಪರಿಶೀಲಿಸಿರುವ ಸುಪ್ರೀಂ ಕೋರ್ಟ್ ಬದಲಾವಣೆಯ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು ಜುಲೈ 22ರಂದೇ ಅಂತಿಮ ವಿಚಾರಣೆ ನಡೆಸಿ ಅಂದೇ ಆದೇಶ ನೀಡುವುದಾಗಿ ತಿಳಿಸಿದೆ. ಜುಲೈ 22ಕ್ಕೆ ನಟ ದರ್ಶನ್ ಬೇಲ್ ಭವಿಷ್ಯ ಹೊರಬೀಳಲಿದೆ.https://www.newsics.com/2025/07/19/journalist-drowns-while-reporting-live-watch-viral-video/