newsics.com
ಬಾಗಲಕೋಟೆ : ಒಂದೆಡೆ ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಜಯಮೃತ್ಯುಂಜಯ ಶ್ರೀಗಳಿಗೆ ಉಚ್ಛಾಟನೆ ಮಾಡೋದು ಬಹುತೇಕ ಫಿಕ್ಸ್ಆಗುತ್ತಿದ್ದಂತೆ, ಸ್ವಾಮಿಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಪಂಚಮಸಾಲಿ ಶ್ರೀಗಳ ಆರೋಗ್ಯದಲ್ಲಿ ಶನಿವಾರ ದಿಢೀರ್ ಏರುಪೇರಾಗಿದೆ. ಬೆಳಿಗಿನ ಜಾವ ಶ್ರೀಗಳಿಗೆ ತೆಲೆನೋವು, ವಾಂತಿ, ಎದೆ ನೋವು ಕಾಣಿಸಿಕೊಂಡಿದೆ.
ಸದ್ಯ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಜಯಮೃತ್ಯುಂಜಯ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಅನಾರೋಗ್ಯದಿಂದ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ದಣಿದಿರುವಂತೆ ಕಂಡಿದೆ.
ಇದರಿಂದಾಗಿ ಅವರನ್ನು ಬಾಗಲಕೋಟೆ ಕೆರೂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರ್ತು ನಿಗಾ ಘಟಕದಲ್ಲಿ ಸ್ವಾಮೀಜಿಗೆ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಮಠದಿಂದ ಸ್ವಾಮೀಜಿಯನ್ನ ಭಕ್ತರು ಕರೆದುಕೊಂಡು ಬಂದಿದ್ದಾರೆ. ಕೂಡಲಸಂಗಮ ಪೀಠದಿಂದ ಬಾಗಲಕೋಟೆ ಕೆರೂಡಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಹಂತದಲ್ಲಿ ಸ್ವಾಮೀಜಿ ನಡೆದುಕೊಂಡೇ ಆಸ್ಪತ್ರೆ ಒಳಗೆ ತೆರಳಿದ್ದಾರೆ.
ಪಂಚಮಸಾಲಿ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರು ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಕಲಬುರ್ಗಿ ಪಂಚಮಸಾಲಿ ಜಿಲ್ಲಾಧ್ಯಕ್ಷ ಮಲ್ಲನಗೌಡ ಪಾಟೀಲ್, ನಿನ್ನೆ ಮಧ್ಯಾಹ್ನ ಸ್ವಾಮೀಜಿಗೆ ಫುಡ್ ಪಾಯ್ಸನ್ ಆಗಿತ್ತು. ಡಾಕ್ಟರ್ ಗೆ ಕೇಳಿ ಮಾತ್ರ ತೆಗೆದುಕೊಂಡಿದ್ದುರು. ಬಳಿಕ ರಾತ್ರಿ ಸ್ವಲ್ಪ ಚೇತರಿಸಿಕೊಂಡಿದ್ದರು. ಬೆಳಿಗ್ಗೆ ತಲೆನೋವು, ವಾಂತಿ, ಎದೆ ನೋವು ಶುರುವಾಗಿ ಅಸ್ವಸ್ಥರಾಗಿದ್ದರು. ಭಕ್ತರು ಆಸ್ಪತ್ರೆಗೆ ಹೋಗೋಣ ಎಂದರು ಅದಕ್ಕೆ ಬಾಗಲಕೋಟೆ ಆಸ್ಪತ್ರೆಗೆ ಬಂದಿದ್ದೇವೆ. ಭಕ್ತರು ಭಯ ಪಡುವಂತದ್ದು ಏನಿಲ್ಲ ಶ್ರೀಗಳು ಕ್ಷೇಮವಾಗಿದ್ದಾರೆ. ಸ್ವಲ್ಪ ಆರೋಗ್ಯ ಏರುಪೇರು ಆಗಿದ್ದರಿಂದ ಆಸ್ಪತ್ರೆಗೆ ಬಂದಿದ್ದೆವು ಎಂದು ಹೇಳಿದ್ದಾರೆ.
ಬೀದರ್ ಗುರುದ್ವಾರದಲ್ಲಿ ಬಾಂಬ್ ಸ್ಫೋಟ ಬೆದರಿಕೆ: ಆತಂಕ ಸೃಷ್ಟಿಸಿದ ಮೇಲ್