newsics.com
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿಯಾದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗೌಡಹಳ್ಳಿ ಟಿಎಂ ಹೂಸೂರು ಬಳಿ ನಡೆದಿದೆ.
ಮೈಸೂರಿನಲ್ಲಿ ಸಾಧನಾ ಸಮಾವೇಶ ಮುಗಿಸಿ ವಾಪಸ್ ಬೆಂಗಳೂರಿಗೆ ಹೋಗುತ್ತಿದ್ದಾಗ ಗೌಡಹಳ್ಳಿ ಬಳಿ ಈ ಘಟನೆ ನಡೆದಿದೆ . ಡಿವೈಡರ್ ಗೆ ವಾಹನ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಗಾಯಗೊಂಡ ಇಬ್ಬರು ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೃಷ್ಟವಶಾತ್ ಯಾವುದೇ ಅಪಾಯ ಆಗಿಲ್ಲ. ಬೆಂಗಾವಲು ಕಾರಿನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
https://www.newsics.com/2025/07/19/four-members-of-a-family-die-after-consuming-poison/