newsics.com
ಬೆಂಗಳೂರು: ಕುಡಿದ ಅಮಲಿನಲ್ಲಿ ಸ್ನೇಹಿತ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಬಳಿ ನಡೆದಿದೆ.
ರಂಗನಾಥ್ (44 ವರ್ಷ) ಕೊಲೆಯಾದ ವ್ಯಕ್ತಿ. ರಂಗನಾಥ್ ಮೂಲತಃ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯವರು .
ಬೆಂಗಳೂರಿನ ನೆಲಗದರನಹಳ್ಳಿಯಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದರು . ರಂಗನಾಥ್ ಟೆಂಪೋ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದರು .
ಗುರುವಾರ ರಾತ್ರಿ ರಂಗನಾಥ್ , ಸ್ನೇಹಿತ ಆನಂದ್ನೊಂದಿಗೆ ಎಣ್ಣೆ ಪಾರ್ಟಿ ಮಾಡಿದ್ದಾರೆ . ನಂತರ ಇಬ್ಬರ ನಡುವೆ ಜಗಳವಾಗಿದೆ . ಜಗಳ ತಾರಕಕ್ಕೇರಿದ್ದು , ಆನಂದ್ ಸ್ನೇಹಿತ ರಂಗನಾಥ್ನ ತಲೆಗೆ 15 ನಿಮಿಷಗಳ ಕಾಲ ಕಲ್ಲಿನಿಂದ ಜಜ್ಜಿದ್ದಾನೆ . ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ . ವಿಚಾರ ತಿಳಿದು ಪೀಣ್ಯಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಪೊಲೀಸರು ಆರೋಪಿ ಪತ್ತೆಗೆ ಬಲೆಬೀಸಿದ್ದಾರೆ .
ತಿರುಪತಿ ಭಕ್ತರಿಗೆ ಟಿಟಿಡಿ ಮಹತ್ವದ ಎಚ್ಚರಿಕೆ; ನಕಲಿ ಖಾತೆ ಬಗ್ಗೆ ಇರಲಿ ಎಚ್ಚರ