newsics.com
ಚಿಕ್ಕಮಗಳೂರು: . ಶಿಶು ಆರೈಕಾ ಸಿಬ್ಬಂದಿ ಒಂದು ವರ್ಷ ಮೂರು ತಿಂಗಳ ಹೆಣ್ಣು ಮಗುವಿನ ಮೇಲೆ ಕುದಿಯುವ ಬಿಸಿ ನೀರು ಸುರಿದ ಪರಿಣಾಮ ಸೊಂಟದ ಕೆಳಭಾಗ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ನಗರದ ಗಾಂಧಿನಾಗರದಲ್ಲಿರುವ ಸರ್ಕಾರಿ ವಿಶೇಷ ದತ್ತು ಸಂಸ್ಥೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಡಿಯಲ್ಲಿ ಬರಲಿದೆ. ಮಲ ವಿಸರ್ಜನೆ ಮಾಡಿದ್ದ ಮಗುವನ್ನು ಸ್ವಚ್ಛ ಮಾಡುವಾಗ ದುರ್ಘಟನೆ ಸಂಭವಿಸಿದೆ.
ಹೆಣ್ಣು ಮಗುವನ್ನ ದತ್ತು ಪಡೆಯಲು ಪೋಷಕರು ಸಿದ್ದತೆ ನಡೆಸಿದ್ದರು. ಅಷ್ಟರಲ್ಲಿ ಸಿಬ್ಬಂದಿಯಿಂದ ಎಡವಟ್ಟಾಗಿದೆ.
ಸದ್ಯ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದತ್ತು ಸಂಸ್ಥೆ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.