newsics.com
ಬೆಂಗಳೂರು : ರಾಜ್ಯದಲ್ಲಿ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ ಹಾಕುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಇನ್ನು ನಿಯಮ ಉಲ್ಲಂಘಿಸಿದರೆ ಮೋಟರ್ ವಾಹನ ಕಾ್ಯದೆ 190(2) ಪ್ರಕಾರ ದಂಡ ಜತೆಗೆ ಮೂರು ತಿಂಗಳು ಜೈಲು ಶಿಕ್ಷೆಯನ್ನು ವಿಧಿಸಬಹುದು.
ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆ. ಈ ಹಿನ್ನೆಲೆಯಲ್ಲಿ ಸೈರನ್ ಬಳಕೆಯಿಂದ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಇದರಿಂದ ವಿಐಪಿ ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ಬಳಕೆಗೆ ಕಡಿವಾಣ ಹಾಕುವಂತೆ ಡಿಜಿ, ಐಜಿಪಿ ಆದೇಶಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ಪ್ರಕಾರ ತುರ್ತು ಸೇವೆಯ ವಾಹನಗಳನ್ನು ಬಿಟ್ಟು ಇನ್ಯಾರೂ ಸೈರನ್ ಬಳಸುವಂತಿಲ್ಲ. ಹಾಗೆಯೇ ಪೊಲಿಸ್ ಸೈರನ್ ಬಳಸುವಂತಿಲ್ಲ. ತುರ್ತು ಸಂದರ್ಭಗಳಲ್ಲಿ ಮಾತ್ರ, ಪೊಲೀಸ್ ಅಂಬ್ಯುಲೆನ್ಸ್, ಅಗ್ನಿ ಶಾಮದಳ ವಾಹನಗಳು ಮಾತ್ರ ಈ ಸೈರನ್ ಬಳಕೆ ಮಾಡಬಹುದಾಗಿದೆ.
https://www.newsics.com/2025/07/21/college-student-dies-after-taking-selfie-video/