newsics.com
ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಈ ವಾರವಿಡೀ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಶಿವಮೊಗ್ಗ, ಮತ್ತು ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಜುಲೈ 27 ರವರೆಗೆ ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮುಂದುವರಿಯಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಕೋರಮಂಗಲ, ಲಾಲ್ಬಾಗ್, ಜಯನಗರ, ಮೆಜೆಸ್ಟಿಕ್, ರಾಜಾಜಿನಗರ, ಮತ್ತು ಹೆಬ್ಬಾಳದಂತಹ ಪ್ರದೇಶಗಳಲ್ಲಿ ವರ್ಷಧಾರೆ ಕಾಣಿಸಿಕೊಂಡಿದೆ. ತಗ್ಗುಪ್ರದೇಶಗಳಲ್ಲಿ ಮಳೆನೀರು ನುಗ್ಗಿದ್ದು, ಅವಾಂತರ ಸೃಷ್ಟಿಸಿದೆ.