newsics.com
ಭಾರೀ ಮಳೆ ಹಿನ್ನೆಲೆಯಲ್ಲಿ ಮನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಅಂಗನವಾಡಿ ,ಪ್ರಾಥಮಿಕ ,ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿದ್ದಾರೆ.
ಸದ್ಯ, ಕರವಾಳಿ ಹಾಗೂ ಮಲೆನಾಡು ಭಾಗದಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿರುವುದರಿಂದ ಹಾಗೂ ನಾಳೆ ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುವಾರದಂದು ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಮಲೆನಾಡು ಭಾಗದಲ್ಲೂ ಭಾರೀ ಮಳೆಯಾಗುತ್ತಿದೆ. ಕೊಂಚ ಬಿಡುವುಕೊಟ್ಟಿದ್ದ ಮಳೆರಾಯ ಮತ್ತೆ ಆರ್ಭಟಿಸಲು ಶುರುಮಾಡಿದ್ದಾನೆ. ಇದರಿಂದ ಆ ಭಾಗದ ಜನ ಜೀವನ ಸಹಜವಾಗಿಯೇ ಅಸ್ತವ್ಯಸ್ತಗೊಂಡಿದೆ. ಅಲ್ಲಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್, ಸಂಪರ್ಕ ಕೂಡ ಕಡಿತಗೊಂಡಿದೆ.
https://www.newsics.com/2025/07/23/a-cat-sitting-on-a-leopards-back/