newsics.com
ಮಡಿಕೇರಿ: ಕರ್ನಾಟಕ ಪಬ್ಲಿಕ್ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮ*ಹ*ತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಎಮ್ಮೆಮಾಡು ಗ್ರಾಮದ ನಿವಾಸಿ ನಜೀರ್ ಎಂಬುವರ ಪತ್ನಿ ಸಫ್ರೀನಾ ಶೇಕ್ (32) ಆತ್ಮ*ಹ*ತ್ಯೆ ಮಾಡಿಕೊಂಡ ದುರ್ದೈವಿ.
ಸಫ್ರೀನಾ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರೆನ್ನಲಾಗಿದ್ದು, ಬುಧವಾರ ಮಧ್ಯರಾತ್ರಿ ಎಮ್ಮೆಮಾಡುವಿನ ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.
ನಾಪೋಕ್ಲುವಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಪತಿ ನಜೀರ್ ಸಫ್ರೀನಾಳನ್ನು ಕರೆತರುವಷ್ಟರಲ್ಲಿ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಪರೀಕ್ಷಿಸಿ ದೃಢಪಡಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಪತಿ ನಜೀರ್ ಹಾಗೂ ಸಫ್ರೀನಾ ನಡುವೆ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಮೃತ ಸಫ್ರೀನಾ ದೇಹದಲ್ಲಿ ಗಾಯಗಳ ಗುರುತು ಇದ್ದು, ಪತಿ ನಜೀರ್ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಆಕೆಯ ಸಹೋದರ ರುವೈಸ್ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಸಂಬಂಧ ರುವೈಸ್ ನಾಪೋಕ್ಲು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Thai attack on Cambodian military base ಕಾಂಬೋಡಿಯನ್ ಮಿಲಿಟರಿ ನೆಲೆ ಮೇಲೆ ಥಾಯ್ ದಾಳಿ, 2 ಏರ್ಬೇಸ್ ಧ್ವಂಸ