Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಂತ್ರವಾದಿ ಮಾತು ಕೇಳಿ ಪುಟ್ಟ ಬಾಲಕನ ಕೊಂದ ಪಾಪಿ ಮಾವ
ದೇಶಪ್ರಮುಖ

ಮಂತ್ರವಾದಿ ಮಾತು ಕೇಳಿ ಪುಟ್ಟ ಬಾಲಕನ ಕೊಂದ ಪಾಪಿ ಮಾವ

Share
1 Min Read
SHARE

newsics.com

ಪತ್ನಿಯನ್ನು ಮರಳಿ ಪಡೆಯಲು ಮಾಂತ್ರಿಕನ ಸಲಹೆಯ ಮೇರೆಗೆ ವ್ಯಕ್ತಿಯೊಬ್ಬ ತನ್ನ ಸಂಬಂಧಿಯೇ ಆದ ಆರು ವರ್ಷದ ಬಾಲಕನನ್ನು ಹತ್ಯೆ ಮಾಡಿದ ಆಘಾತಕಾರಿ ಘಟನೆ ರಾಜಸ್ಥಾನದ ಅಲ್ವಾರದಲ್ಲಿ ನಡೆದಿದೆ.

ಮೃತ ಬಾಲಕನನ್ನು ಆರು ವರ್ಷದ ಲೋಕೇಶ್ ಎಂದು ಗುರುತಿಸಲಾಗಿದೆ.
ಬಾಲಕ ಲೋಕೇಶ್ ಜುಲೈ 19ರಿಂದ ನಾಪತ್ತೆಯಾಗಿದ್ದ, ಅದೇ ದಿನ ಸಂಜೆ ಬಾಲಕನ ಮೃತದೇಹ ಪಾಳುಬಿದ್ದ ಕಟ್ಟಡವೊಂದರ ಒಳಗೆ ಒಣಹುಲ್ಲಿನಿಂದ ಮುಚ್ಚಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಾಲಕನ ಗಂಟಲು ಸೀಳಲ್ಪಟ್ಟಿತ್ತು. ದೇಹದ ಹಲವು ಭಾಗಗಳಿಗೆ ಸಿರೀಂಜ್‌ನಿಂದ ಚುಚ್ಚಿದ ಗುರುತುಗಳಿದ್ದವು. ಈ ಮಾಂತ್ರಿಕನು ಮಾಟಮಂತ್ರ ಮಾಡುವುದಕ್ಕಾಗಿ ಬಾಲಕನ ದೇಹಕ್ಕೆ ಸಿರಿಂಜ್ ಚುಚ್ಚಿ ರಕ್ತವನ್ನು ತೆಗೆದಿರಬಹುದು ಎಂದು ಪೊಲೀಸರು ಹೇಳಿದ್ದಾರೆ.
ಈ ಬಗ್ಗೆ ತನಿಖೆಗಿಳಿದ ಪೊಲೀಸರು ಮೊದಲಿಗೆ ಬಾಲಕ ಲೋಕೇಶ್‌ನ ಮಾವ ಮನೋಜ್ ಕುಮಾರ್‌ನನ್ನು ಬಂಧಿಸಿದ್ದಾರೆ. ಈ ವೇಳೆ ಆರೋಪಿ ಈ ಅಪರಾಧದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಅಲ್ಲದೇ ಮಂತ್ರವಾದಿ ಸುನೀಲ್ ಕುಮಾರ್‌ನ ಸಲಹೆಯಂತೆ ಮಗುವನ್ನು ಕೊಂದಿದ್ದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಇದಾದ ನಂತರ ಪೊಲೀಸರು ಮಾಂತ್ರಿಕ ಸುನೀಲ್‌ನನ್ನು ಬಂಧಿಸಿದ್ದಾರೆ. ಜುಲೈ 22 ರಂದು ಸುನೀಲ್ ಹಾಗೂ ಮನೋಜ್‌ನನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ಮನೆಬಿಟ್ಟು ಹೋಗಿದ್ದ ಮನೋಜ್ ಹೆಂಡ್ತಿ:
ಪೊಲೀಸರು ಹೇಳುವ ಪ್ರಕಾರ, ಮನೋಜ್‌ನ ಹೆಂಡ್ತಿ ಮನೆಯಲ್ಲಿನ ಕೌಟುಂಬಿಕ ಕಲಹದಿಂದಾಗಿ ಮನೆ ಬಿಟ್ಟು ಹೋಗಿ ತನ್ನ ತಾಯಿ ಮನೆಯಲ್ಲಿ ವಾಸ ಮಾಡುತ್ತಿದ್ದಳು. ಇದರಿಂದ ಬೇಸರಗೊಂಡಿದ್ದ ಆತ ಆಕೆಯನ್ನು ಹೇಗಾದರೂ ಮನೆಗೆ ಕರೆಸಿಕೊಳ್ಳಬೇಕು ಎಂದು ಮಂತ್ರವಾದಿಯ ಬಳಿ ಹೋಗಿದ್ದಾನೆ. ಈ ವೇಳೆ ಮಂತ್ರವಾದಿ ಸುನೀಲ್ ಸಮಸ್ಯೆ ಪರಿಹರಿಸುವುದಕ್ಕೆ 12,000 ರೂಪಾಯಿ ನೀಡುವಂತೆ ಮನೋಜ್‌ಗೆ ಕೇಳಿದ್ದಾನೆ. ಜೊತೆಗೆ ಈ ಸಮಸ್ಯೆಯನ್ನು ಪರಿಹರಿಸಲು ಮಾಡುವ ತಂತ್ರಕ್ಕೆ ಮಗುವಿನ ರಕ್ತ ಹಾಗೂ ಕಿಡ್ನಿ ಬೇಕು ಎಂದು ಹೇಳಿದ್ದಾನೆ ಇದಕ್ಕೆ ಮನೋಜ್ ಒಪ್ಪಿದ್ದಾನೆ.

ರಾಷ್ಟ್ರಪತಿ ಭವನಕ್ಕೆ ಕನ್ನಡದ ತಾಳೆಯೋಲೆಯ ಹಸ್ತಪ್ರತಿ

TAGGED:The sinful father-in-law killed the little boy after listening to the sorcerer's words.
Share This Article
Facebook Twitter Copy Link Print
Previous Article ರಾಷ್ಟ್ರಪತಿ ಭವನಕ್ಕೆ ಕನ್ನಡದ ತಾಳೆಯೋಲೆಯ ಹಸ್ತಪ್ರತಿ
Next Article ಮಹಿಳೆಯರು ಮುಖಕ್ಕೆ ಪರದೆ ಹಾಕಿಕೊಂಡು ಹರಿ ಹರ ವೀರ ಮಲ್ಲು ಸಿನಿಮಾ ನೋಡಿದ್ದೇಕೆ?

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?