newsics.com
ಹಾಸನ :ಡಿಸಿಎಂ ಡಿಕೆ ಶಿವಕುಮಾರ್, ಹಾಸನದ ಪ್ರಸಿದ್ಧ ಜೇನುಕಲ್ ಸಿದ್ದೇಶ್ವರ ದೇವಾಲಯ ಮತ್ತು ಕೋಡಿ ಮಠಕ್ಕೂ ಭೇಟಿ ನೀಡಿದ್ದಾರೆ.
ಇಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿವಿಧ ಕಾರ್ಯಕ್ರಮಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಭಾಗಿಯಾಗಿದ್ದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೆಂಪಲ್ ರನ್ ಮಾಡಿದ್ದು ಅರಸೀಕೆರೆ ತಾಲೂಕಿನ ಕೋಡಿ ಮಠಕ್ಕೆ ಭೇಟಿ ನೀಡಿದ್ದಾರೆ.
ಹಾಸನದ ಜೇನುಕಲ್ ಸಿದ್ದೇಶ್ವರ ದೇವಾಲಯಕ್ಕೆ ಡಿಕೆ ಶಿವಕುಮಾರ್ ಭೇಟಿ ಕೊಟ್ಟಿದ್ದು, ಅರಸೀಕೆರೆ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ಡಿಕೆಶಿ ದೇವಾಲಯಗಳಿಗೆ ಭೇಟಿಕೊಟ್ಟಿದ್ದಾರೆ. ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಕೋಡಿ ಮಠಕ್ಕೆ ತೆರಳಿದ್ದಾರೆ.
ಕೋಡಿ ಮಠದ ಸ್ವಾಮೀಜಿ ಜೊತೆ ಚರ್ಚಿಸಿ ಹೊರ ಬಂದಾಗ ಘೋಷಣೆ ಕೂಗಲಾಯಿತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಡಿಕೆ ಶಿವಕುಮಾರ್ ತಾಳೆಗರಿ ಭವಿಷ್ಯ ಕೇಳಿದ್ದಾರೆ. ಸ್ವಾಮೀಜಿ ಭೇಟಿಯಾಗಿ ಡಿಕೆ ಶಿವಕುಮಾರ್ ಹೊರ ಬಂದಾಗ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದರು.
https://www.newsics.com/2025/07/26/woman-gang-raped-after-fainting-during-physical-examination/