newsics.com
HIV ಇದೆ ಎಂದು ಮರ್ಯಾದೆಗೆ ಅಂಜಿದ ಅಕ್ಕ, ಒಡ ಹುಟ್ಟಿದ ತಮ್ಮನ ಕುತ್ತಿಗೆ ಹಿಸುಕಿ ಮುಗಿಸಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
23 ವರ್ಷದ ಯುವಕನೊಬ್ಬನಿಗೆ ಅಪಘಾತವಾಗಿತ್ತು. ಕಾಲಿಗೆ ಗಂಭೀರ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಆಪರೇಷನ್ ಮಾಡುವ ಅಗತ್ಯ ಇತ್ತು.ಹೀಗಾಗಿ ವೈದ್ಯಾಧಿಕಾರಿಗಳು ನಡೆಸಿದ ತಪಾಸಣೆ ವೇಳೆ ಹೆಚ್ಐವಿ ಎಂದು ತಿಳಿದಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿತ್ತು. ಆದರೆ ತಮ್ಮನಿಗೆ ಹೆಚ್ಐವಿ ಸೋಂಕು ಇರೋದನ್ನ ಅಕ್ಕ ಸಹಿಸಲಿಲ್ಲ. ಎಲ್ಲಿ ಮನೆಯ ಮರ್ಯಾದೆ ಹೋಗುತ್ತೋ ಅನ್ನೋ ಕಾರಣಕ್ಕೆ ಮರ್ಯಾದೆ ಹ*ತ್ಯೆಗೆ ಮುಂದಾಗಿದ್ದಾಳೆ. ಮಣಿಪಾಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಕ್ಕ-ಭಾವ ಸೇರಿ ಕೊಲೆ ಮಾಡಿದ್ದಾರೆ.
ನಂತರ ಮೃತದೇಹವನ್ನು ದುಮ್ಮಿ ಗ್ರಾಮಕ್ಕೆ ತಂದಿದ್ದಾರೆ. ಕುತ್ತಿಗೆಯಲ್ಲಿ ಗಾಯ ಇರೋದನ್ನು ಗಮನಿಸಿದ ಸ್ಥಳೀಯರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಹೊಳಲ್ಕೆರೆ ಠಾಣೆಗೆ ಮೃತನ ತಂದೆ ದೂರು ನೀಡಿದ್ದಾರೆ. ವಿಚಾರಣೆಯಲ್ಲಿ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಬಗ್ಗೆ ಬಯಲಾಗಿದೆ.