newsics.com
ವಿಜಯಪುರ : ವಿಜಯಪುರದಲ್ಲಿ ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿಜಯಪುರ ಜಿಲ್ಲೆಯ ನಡುಗುಂದಿ ತಾಲೂಕಿನ ಬ್ಯಾಲಿಹಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಮಂದಿಗೆ ವಾಂತಿ , ಭೇದಿ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಗ್ರಾಮ ಪಂಚಾಯಿತಿಯಿಂದ ಸರಬರಾಜು ಮಾಡಿದ ಕಲುಷಿತ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಹಲವರನ್ನು ಬಸವನ ಬಾಗೇವಾಡಿ ಬಾಗಲಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಲವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.