newsics.com
ಪ್ರಸ್ತುತ ಯೆಮನ್ ದೇಶದಲ್ಲಿ ಕೊಲೆ ಆರೋಪದಡಿ ಬಂಧನದಲ್ಲಿರುವ ಕೇರಳ ನರ್ಸ್ ನಿಮಿಷಾ ಪ್ರಿಯಾಳಿಗೆ ಕಡೆಗೂ ಬಿಗ್ ರಿಲೀಫ್ ಸಿಕ್ಕಿದೆ. ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಪ್ರಿಯಾಗೆ ಅಧಿಕೃತವಾಗಿ ಶಿಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ಖಚಿತಪಡಿಸಿದೆ.
ಕಚೇರಿಯ ಅಧಿಕೃತ ಹೇಳಿಕೆಯಲ್ಲಿ, ‘ಜು.16ಕ್ಕೆ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ರದ್ದುಗೊಳಿಸಲಾಗಿದೆ. ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಈ ಹಿಂದೆ ತಾತ್ಕಾಲಿಕವಾಗಿ ಮುಂದೂಡಿದ್ದ ಮರಣದಂಡನೆಯನ್ನು ಇದೀಗ ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ’ ಎಂದು ಸ್ಪಷ್ಟಪಡಿಸಲಾಗಿದೆ.
ಆದಾಗ್ಯೂ, ಯೆಮೆನ್ ಅಧಿಕಾರಿಗಳಿಂದ ಅಧಿಕೃತ ಲಿಖಿತ ಸಂವಹನ ಇನ್ನೂ ಬಂದಿಲ್ಲ ಎಂದು ಸ್ಪಷ್ಟಪಡಿಸಿದೆ.
ಯೆಮೆನ್ನ ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ಅಲ್ಲಿ ಭಾರತೀಯ ಗ್ರಾಂಡ್ ಮುಫ್ತಿಯ ಕೋರಿಕೆಯ ಮೇರೆಗೆ ಶೇಖ್ ಉಮರ್ ಹಫೀಲ್ ತಂಗಲ್ ನೇಮಕ ಮಾಡಿದ ಹಿರಿಯ ಯೆಮೆನ್ ವಿದ್ವಾಂಸರು ಉತ್ತರ ಯೆಮೆನ್ನ ಆಡಳಿತಗಾರರು ಮತ್ತು ಅಂತಾರಾಷ್ಟ್ರೀಯ ರಾಜತಾಂತ್ರಿಕರೊಂದಿಗೆ ಮಧ್ಯಸ್ಥಿಕೆ ವಹಿಸಿದರು.
ಜುಲೈ 16 ರಂದು ಗಲ್ಲು ಜಾರಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಗಿತ್ತು. ಈಗ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದರೊಂದಿಗೆ ಸಭೆ ಮುಕ್ತಾಯವಾಯಿತು. ಮುಂದಿನ ಪ್ರಕ್ರಿಯೆ ಬಗ್ಗೆ ಮತ್ತೆ ಸಭೆ ನಡೆಯಲಿವೆ ಎಂದು ಅದು ಹೇಳಿದೆ.
ವ್ಯಕ್ತಿಯೊಬ್ಬನ ಹತ್ಯೆ ಪ್ರಕರಣದಲ್ಲಿ ನಿಮಿಷಪ್ರಿಯಾಗೆ ಗಲ್ಲಾಗಿತ್ತು.
ನಿವೇದಿತಾ ಗೌಡ ವಿಡಿಯೋ ನೋಡಿ ಸುಸ್ತಾದ ಪಡ್ಡೆ ಹುಡಗರು! ಹುಷಾರ್ ಕಣಮ್ಮೀ ಎಂದ ನೆಟ್ಟಿಗರು