newsics.com
ಹೈದರಾಬಾದ್: ನಿಜ ಜೀವನದ ‘ಬಾಲಿಕಾ ವಧು’ ಪ್ರಕರಣ ತೆಲಂಗಾಣದಲ್ಲಿ ನಡೆದಿದ್ದು, ಬಾಲ್ಯವಿವಾಹಕ್ಕೊಳಗಾಗಿದ್ದ 13 ವರ್ಷದ ಬಾಲಕಿಯನ್ನು ರಕ್ಷಿಸಲಾಗಿದೆ.
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೇ 28ರಂದೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೂಲಗಳ ಪ್ರಕಾರ, ಎಂಟನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು 40 ವರ್ಷದ ಶ್ರೀನಿವಾಸ್ ಗೌಡ್ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು.
ಈ ವಿಷಯವನ್ನು ಬಾಲಕಿ ತನ್ನ ಶಿಕ್ಷಕಿಗೆ ತಿಳಿಸಿದ್ದು, ಶಿಕ್ಷಕಿ ತಹಸೀಲ್ದಾರ್ ರಾಜೇಶ್ವರ್ ಮತ್ತು ಇನ್ಸ್ಪೆಕ್ಟರ್ ಪ್ರಸಾದ್ ಅವರಿಗೆ ಮಾಹಿತಿ ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.
ನಂತರ ಜಿಲ್ಲಾ ಮಕ್ಕಳ ಸಂರಕ್ಷಣಾ ಅಧಿಕಾರಿಗಳು ಮತ್ತು ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ.
ಅತ್ಯಾಚಾರ ಆರೋಪ : ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ನಿರೀಕ್ಷಣಾ ಜಾಮೀನು ಅರ್ಜಿ ವಜಾ