newsics.com
ದೊಡ್ಡಬಳ್ಳಾಪುರ: ನಟ ಪ್ರಥಮ್ ಅವರ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನಾಕಾರರು ಗುರುವಾರ ನಟನ ಮುಖಕ್ಕೆ ಮಸಿ ಬಳಿದಿದ್ದಾರೆ.
ಈ ಘಟನೆಯು ಪೊಲೀಸ್ ಠಾಣೆಯ ಮುಂದೆಯೇ ನಡೆದಿದ್ದು, ವೈರಲ್ ಆಗಿದೆ. ಪ್ರತಿಭಟನಾಕಾರರು ಪ್ರಥಮ್ ಬಂಧನಕ್ಕೆ ಆಗ್ರಹಿಸಿದ್ದಾರೆ.
ನಟ ದರ್ಶನ್ ಅಭಿಮಾನಿಗಳು ಹಾಗೂ ಆತನ ಸಹಚರರು ಜೈ ಡಿ ಬಾಸ್ ಎಂದು ಕೂಗುತ್ತಾ ತನಗೆ ಚಾಕು ಚುಚ್ಚಲು ಬಂದಿದ್ದರು ಎಂದು ಆರೋಪಿಸಿ ದೂರು ಕೊಟ್ಟ ಬಗ್ಗೆ ಹೇಳಿಕೆ ದಾಖಲಿಸಲು ಹೋಗಿದ್ದ ನಟ ಪ್ರಥಮ್ ಮುಖಕ್ಕೆ ಹೋರಾಟಗಾರರು ಮಸಿ ಬಳಿದಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಮುಂದೆ ಗುರುವಾರ ಸಂಜೆ ನಾಟಕೀಯ ಘಟನೆಗಳು ನಡೆದಿವೆ. ಅಂಬೇಡ್ಕರ್ ಸೇನೆ ಸದಸ್ಯರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ಮತ್ತು ನೂಕುನುಗ್ಗಲು ಉಂಟಾಯಿತು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ನಟ ಪ್ರಥಮ್ ನೀಡಿದ ಹೇಳಿಕೆಗೆ ಆಕ್ರೋಶಗೊಂಡ ಅಂಬೇಡ್ಕರ್ ಸೇನೆ ಸದಸ್ಯರು, ಗುರುವಾರ ಸಂಜೆ ಪೊಲೀಸ್ ಠಾಣೆಯ ಮುಂದೆ ಬಂದು ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ಸಂಘದ ಸದಸ್ಯರ ಪ್ರಕಾರ, ನಟ ಪ್ರಥಮ್ ಸಂವಿಧಾನ ಹಾಗೂ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ‘ಆತನಿಗೆ ಸಂವಿಧಾನದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಲು ಏನು ಹಕ್ಕಿದೆ ‘ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಪೋಲಿಸರು ಆತನ ರಕ್ಷಣೆ ಮಾಡುತ್ತಾರೆಂಬ ಧೈರ್ಯದಿಂದಲೇ ಅವಹೇಳನಕಾರಿ ಹೇಳಿಕೆ ಕೊಡುತ್ತಿದ್ದಾನೆ. ತನ್ನ ಹೇಳಿಕೆ ಬಗ್ಗೆ ಆತ ಎಲ್ಲಿವರೆಗೂ ಕ್ಷಮೆ ಕೇಳುವುದಿಲ್ಲವೋ, ಅಲ್ಲಿವರೆಗೂ ನಾವು ಹೋರಾಟ ಕೈಬಿಡಲ್ಲ ಎಂದು ಅಂಬೇಡ್ಕರ್ ಸಂಘಟನೆ ಸದಸ್ಯರು ಎಚ್ಚರಿಸಿದರು.
ನಟ ಪ್ರಥಮ್ ಗ್ರಾಮಾಂತರ ಠಾಣೆಗೆ ಬರುವ ವೇಳೆ, ಪ್ರತಿಭಟನಾಕಾರರು ಅವರ ಕಾರು ತಡೆದು ನೇರವಾಗಿ ಹಸ್ತಕ್ಷೇಪ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪರಿಸ್ಥಿತಿ ಉಲ್ಬಣಗೊಂಡಿದ್ದು, ಕೆಲವು ಸದಸ್ಯರು ಮಸಿ ಬಳಿಯಲು ಯತ್ನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಸನ್ನಿವೇಶ ಗಂಭೀರ ರೂಪ ತೆಗೆದುಕೊಳ್ಳುತ್ತಿದ್ದಂತೆ ಪೊಲೀಸ್ ಇಲಾಖೆ ತಕ್ಷಣ ಮಧ್ಯಸ್ಥಿಕೆ ಮಾಡಿದ್ದು, ಪ್ರಥಮ್ ಅವರನ್ನು ರಕ್ಷಿಸಿ ಸ್ಥಳದಿಂದ ಭದ್ರವಾಗಿ ಕಳಿಸಿದ್ದಾರೆ. ಈ ವೇಳೆ ಪೊಲೀಸರಿಗೂ ಪ್ರತಿಭಟನಾಕಾರರಿಗೂ ನೂಕಾಟ ನಡೆದಿದ್ದು, ಕೆಲ ಕ್ಷಣ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.
Dharmasthala Case ಧರ್ಮಸ್ಥಳ ಕೇಸ್: ಸಮಾಧಿ ಅಗೆಯುವ ಜಾಗದಲ್ಲಿ ಕಟ್ಟೆಚ್ಚರ, ಬಿಗಿ ಭದ್ರತೆ