newsics.com
ಮುಂಬೈ: ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಸಿಲುಕಿಸಿ ಬಂಧಿಸಲು ಸಂಚು ನಡೆದಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ (ಎಟಿಸ್) ನಿವೃತ್ತ ಅಧಿಕಾರಿ ಮೆಹಬೂಬ್ ಮುಜಾವರ್ ಬಹಿರಂಗಪಡಿಸಿದ್ದಾರೆ.
ಈ ಮಧ್ಯೆ, ಮಾಲೇಗಾಂವ್ ಸ್ಫೋಟ ಪ್ರಕರಣವನ್ನು ಹಿಂದೂ ಭಯೋತ್ಪಾದನೆ ಎಂದು ಬಿಂಬಿಸಲು ನಡೆಸಿದ ಪ್ರಯತ್ನಕ್ಕೆ ಕೋರ್ಟ್ ಕೂಡ ಛೀಮಾರಿ ಹಾಕಿದೆ. ಅಲ್ಲದೆ, 2008ರ ಪ್ರಕರಣದಲ್ಲಿ ಬಂಧಿಸಿದ್ದ 7 ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್, ಲೆ.ಕರ್ನಲ್ ಪೋರೋಹಿತ್ ಸೇರಿ 7 ಮಂದಿಯನ್ನು ಆರೋಪಿಗಳು ಎಂದು ಬಿಂಬಿಸಿ ಪ್ರಕರಣದಲ್ಲಿ ಸಿಲುಕಿಸಿದ್ದು ಮಾತ್ರವಲ್ಲ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅರೆಸ್ಟ್ ಮಾಡಲು ಹಿರಿಯ ಅಧಿಕಾರಿಗಳು ಸೂಚಿಸಿದ್ದರು ಎಂದು ನಿವೃತ್ತ ಅಧಿಕಾರಿ ಮೆಹಬೂಬ್ ಮುನಾವರ್ ಹೇಳಿದ್ದಾರೆ.
ಮಾಲೇಗಾಂವ್ ಸ್ಫೋಟದ ಪ್ರಕರಣದಲ್ಲಿ ಮೆಹಬೂಬ್ ಮುನಾವರ್ ಮಹಾರಾಷ್ಟ್ರ ಎಟಿಎಸ್ ಅಧಿಕಾರಿಯಾಗಿ ತನಿಖೆ ನಡೆಸಿದ್ದರು. ಈ ವೇಳೆ ಹಿರಿಯ ಅಧಿಕಾರಿ ಪರಮ್ ಬೀರ್ ಸಿಂಗ್ ಸೇರಿದಂತೆ ಕೆಲವರು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅರೆಸ್ಟ್ ಮಾಡಲು ಸೂಚಿಸಿದ್ದರು. ಮಾಲೇಗಾಂವ್ ಸ್ಫೋಟದಲ್ಲಿ ಆರ್ಎಸ್ಎಸ್ ಮುಖ್ಯಸ್ಥರನ್ನು ಬಂಧಿಸಿ, ಇಡೀ ಪ್ರಕರಣವನ್ನು ಹಿಂದೂ ಹಾಗೂ ಆರ್ಎಸ್ಎಸ್ ಸಂಘಟನೆ ಮೇಲೆ ಹೊರಿಸಲು ಷಡ್ಯಂತ್ರ ನಡೆದಿತ್ತು ಎಂದು ಮೆಹಬೂಬ್ ಮುನಾವರ್ ಹೇಳಿದ್ದಾರೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮೇಲೆ ಮಾಲೇಗಾಂವ್ ಪ್ರಕರಣದಲ್ಲಿ ಸುಳ್ಳು ಕೇಸ್ ದಾಖಲಾಗಿತ್ತು. ಕೇಸ್ ದಾಖಲಿಸಿದ ಬೆನ್ನಲ್ಲೇ ಭಾಗವತ್ ಬಂಧಿಸಲು ಸೂಚನೆಯೂ ಬಂದಿತ್ತು ಎಂದು ನಿವೃತ್ತ ಎಟಿಎಸ್ ಅಧಿಕಾರಿ ಮಹೆಬೂಬ್ ಮುನಾವರ್ ಹೇಳಿದ್ದಾರೆ. ಕೋರ್ಟ್ ತೀರ್ಪು ಬೆನ್ನಲ್ಲೇ ಇದೀಗ ಮಾಲೇಗಾಂವ್ ಸ್ಫೋಟದ ಮತ್ತಷ್ಟು ಷಡ್ಯಂತ್ರಗಳು ಬಯಲಾಗುತ್ತಿವೆ. 2009ರಲ್ಲಿ ಮೋಹನ್ ಭಾಗವತ್ ಆರ್ಎಸ್ಎಸ್ ಮುಖ್ಯಸ್ಥರಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಅರೆಸ್ಟ್ಗೆ ಎಲ್ಲಾ ಸಿದ್ಧತೆಗಳು ನಡೆದಿದ್ದವು. ಈ ಪ್ರಕರಣದಲ್ಲಿ ಆರ್ಎಸ್ಎಸ್ ಹಾಗೂ ಮೋಹನ್ ಭಾಗವತ್ ಸಿಲುಕಿಸಲು ಪ್ರಯತ್ನಗಳು ನಡೆದಿದ್ದವು ಎಂದು ಮೆಹಬೂಬ್ ಮುನಾವರ್ ಹೇಳಿದ್ದಾರೆ.
ಆರ್ಎಸ್ಎಸ್ ಮುಗಿಸಲು ಮುಖ್ಯಸ್ಥರನ್ನು ಬಂಧಿಸಲು ಸೂಚಿಸಲಾಗಿತ್ತು. ಆದರೆ ಕಾನೂನು ವಿರುದ್ಧ ನಡೆದುಕೊಳ್ಳಲು ನಾನು ಒಪ್ಪಲಿಲ್ಲ. ಹೀಗಾಗಿ ನನ್ನ ವಿರುದ್ದ ಪ್ರಕರಣ ದಾಖಲಿಸಿದ್ದರು. ಬಳಿಕ ಕೋರ್ಟ್ ನನ್ನ ಮೇಲಿನ ಪ್ರಕರಣ ರದ್ದುಗೊಳಿಸಿತ್ತು ಎಂದು ಮುನಾವರ್ ಹೇಳಿದ್ದಾರೆ.
ಈ ಷಡ್ಯಂತ್ರ ನಡೆಸಿದ್ದ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ.
ನಿಮಿಷಾ ಪ್ರಿಯಾ ಮರಣದಂಡನೆ ರದ್ದಾಗಿಲ್ಲ, ಮುಂದೂಡಲಾಗಿದೆ: ಯೆಮೆನ್ ವಿದೇಶಾಂಗ ಸಚಿವಾಲಯ ಸ್ಪಷ್ಟನೆ
Chandrashekhar Siddhi ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮ*ಹತ್ಯೆ