newsics.com
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಗಂಭೀರ ಅತ್ಯಾ1ಚಾರ ಪ್ರಕರಣದ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶುಕ್ರವಾರದಿಂದ ಆರಂಭವಾಗಿದೆ. ಶನಿವಾರ ಮಧ್ಯಾಹ್ನ 2.45ಕ್ಕೆ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಕೋರ್ಟ್ ಹೇಳಿದೆ.
ವಾದಿ ಪ್ರತಿವಾದಿಗಳು ಈ ಕುರಿತು ವಾದಿಸಿದ ಬಳಿಕ ದೋಷಿಗೆ ಏನಾದರೂ ಹೇಳುವುದು ಇದೆಯೇ ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಪ್ರಜ್ವಲ್ , ಚುನಾವಣೆಗೂ 6 ದಿನ ಮುಂಚೆ ವಿಡಿಯೋ ಹರಿಬಿಟ್ಟಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದೆ. ಸಂತ್ರಸ್ತರು ಯಾರೂ ನೇರವಾಗಿ ದೂರು ದಾಖಲಿಸಿಲ್ಲ. ಇಡೀ ರಾಜ್ಯದಲ್ಲೇ ನನಗೆ ಒಳ್ಳೆಯ ಹೆಸರಿದೆ ಎಂದು ಪ್ರಜ್ವಲ್ ಉತ್ತರಿಸಿದರು.
ಇದಕ್ಕೆ ನಿನ್ನ ವಿದ್ಯಾರ್ಹತೆ ಏನು ಎಂದು ನ್ಯಾಯಾಧೀಶರು ಕೇಳಿದಾಗ, ನಾನು ಮೆಕ್ಯಾನಿಕಲ್ ಎಂಜಿನಿಯರ್ ಎಂದು ಪ್ರಜ್ವಲ್ ಉತ್ತರಿಸಿದ ಘಟನೆಯೂ ನಡೆಯಿತು.
ಅಲ್ಲದೇ ಪ್ರಜ್ವಲ್ ವಯಸು ಇನ್ನು ಚಿಕ್ಕದಾಗಿರುವುದರಿಂದ ತನ್ನ ತಪ್ಪನ್ನು ತಿದ್ದಿಕೊಳ್ಳಲು ಅವಕಾಶವಿದೆ. ಹಾಗಾಗಿ ನ್ಯಾಯಾಲಯ ಈ ಪ್ರಕರಣವನ್ನು ಅನುಕಂಪದಿಂದ ಗಮನಿಸಿ ಶಿಕ್ಷೆ ಪ್ರಮಾಣ ಕಡಿಮೆಗೊಳಿಸಬೇಕೆಂದು ಪ್ರಜ್ವಲ್ ಪರ ವಕೀಲರು ಮನವಿ ಮಾಡಿದರು. ಆದರೆ ಇದಕ್ಕೆ ಒಪ್ಪದ ಎಸ್ಪಿಪಿ ಗರಿಷ್ಠ ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಪರ ವಕೀಲರು ಮುಂದೆ ಹೈಕೋರ್ಟ್ ಮೊರೆ ಹೋಗಲು ಅವಕಾಶಗಳು ಇವೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನೀಡಿರುವ ಶಿಕ್ಷೆಗೆ ತಡೆ ಅಥವಾ ರದ್ದು ಕೋರಿ ಹೈಕೋರ್ಟ್ ಗೆ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಬಹುದು. ಹಾಗೇ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಹೈಕೋರ್ಟ್ ಮೋರೆ ಹೋಗಬಹುದು ಎಂದು ಹೇಳಲಾಗುತ್ತಿದೆ.
ಪ್ರಜ್ವಲ್ ರೇವಣ್ಣ ವಿರುದ್ದ ಒಟ್ಟಾರೆ ನಾಲ್ಕು ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು ಅವುಗಳ ಪೈಕಿ ಒಂದರಲ್ಲಿ ಶಿಕ್ಷೆ ಪ್ರಕಟಗೊಂಡಿದೆ. ಇನ್ನೂ ಮೂರು ಪ್ರಕರಣಗಳ ವಿಚಾರಣೆ ಮತ್ತು ತೀರ್ಪು ಬಾಕಿಯಿದ್ದು, ಪ್ರತ್ಯೇಕವಾಗಿ ಶಿಕ್ಷೆ ವಿಧಿಸಲಾಗುವುದು.
ಮಕ್ಕಳನ್ನ ಅಂಗನವಾಡಿಯಲ್ಲಿ ಬೀಗ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ; ಆಗಿದ್ದೇನು?