newsics.com
ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಕಾರ್ಮಿಕ ಸಂಘಟನೆಗಳ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪದ ಕಾರಣ, ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ಮುಂದಾಗಿದ್ದರು. ಇದೀಗ ನಾಳೆ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶ ನೀಡಿದೆ.
ಸಾರಿಗೆ ನೌಕರರ ಮುಷ್ಕರ ಕುರಿತು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ವಿಚಾರಣೆ ನಡೆದಿತ್ತು. ಒಂದೆಡೆ ಸಿಎಂ ಸಿದ್ದರಾಮಯ್ಯ ನೌಕರರ ಜೊತೆ ಸಂಧಾನ ಮಾತುಕತೆ ನಡೆಸಿದ್ದರು. ಈ ವೇಳೆ ಬಾಕಿ ವೇತನ ನೀಡಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದರು. ಇತ್ತ ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆ ಭಾರಿ ಮಹತ್ವ ಪಡೆದುಕೊಂಡಿತ್ತು. ನ್ಯಾ.ಕೆ ಎಸ್ ಮುದಗಲ್ ಮತ್ತು ಎಂ.ಜಿ.ಎಸ್ ಕಮಲ್ ನೇತೃತ್ವದ ವಿಭಾಗೀಯ ಪೀಠದಲ್ಲಿ ವಿಚಾರಣೆಯಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹೈಕೋರ್ಟ್ ಆದೇಶದ ಪ್ರಕಾರ ನಾಳೆ ಒಂದು ದಿನ ಮುಷ್ಕರ ನಡೆಸದಂತೆ ಕೋರ್ಟ್ ಸೂಚಿಸಿದೆ.
ನಾಳೆ ಒಂದು ದಿನ ಸಾರಿಗೆ ಬಸ್ ಸೇವೆ ಲಭ್ಯವಾಗಲಿದೆ. ಹೈಕೋರ್ಟ್ ಆದೇಶದಿಂದ ಇದೀಗ ಸಾರಿಗೆ ನೌಕರರು ಆಗಸ್ಟ್ 6 ರಿಂದ ಮುಷ್ಕರ ಆರಂಭಿಸಲು ಮುಂದಾಗಿದ್ದಾರೆ.