newsics.com
ಬೆಳಗಾವಿ: ರೈತನೋರ್ವನ ಜಮೀನಿನಲ್ಲಿ ಹೈಟೆಕ್ ವಾಮಾಚಾರ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಯಳ್ಳೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಲಿಂಬೆಹಣ್ಣು, ಅರಿಶಿಣ, ಕುಂಕುಮದಂತಹ ವಸ್ತುಗಳನ್ನು ಬಳಸಿ ವಾಮಾಚಾರ ನಡೆಸುವುದು ಸಾಮಾನ್ಯವಾದರೂ, ಈ ಬಾರಿ ರೈತ ಸದಾನಂದ ದೇಸಾಯಿ ಅವರ ಜಮೀನಿನಲ್ಲಿ ಸ್ಮಾರ್ಟ್ಫೋನ್ ಸೇರಿದಂತೆ ವಾಮಾಚಾರದ ವಸ್ತುಗಳು ಪತ್ತೆಯಾಗಿವೆ.
ಈ ಘಟನೆಯನ್ನು ಹೈಟೆಕ್ ವಾಮಾಚಾರವಾಗಿದೆ. ಗ್ರಾಮಸ್ಥರು ಈ ವಿಚಿತ್ರ ಘಟನೆಯನ್ನು ಗಮನಿಸಿ, ರೈತ ಮುಖಂಡ ರಾಜು ಮರವೆ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ರಾಜು, ಲಿಂಬೆಹಣ್ಣು, ಮೊಸರು, ತೆಂಗಿನಕಾಯಿ, ಎಲೆ-ಅಡಿಕೆ, ಕ್ಯಾರ್ ಬೀಜಗಳ ಜೊತೆಗೆ ಒಂದು ಸ್ಮಾರ್ಟ್ಫೋನ್ ಕಂಡು ದಿಗ್ಭ್ರಮೆಗೊಂಡಿದ್ದಾರೆ.
ಈ ವಸ್ತುಗಳನ್ನು ಗಿಡಕ್ಕೆ ಗಂಟು ಕಟ್ಟಿ ಜಮೀನಿನಲ್ಲಿ ಇರಿಸಲಾಗಿತ್ತು. ಕಳೆದ ಕೆಲವು ತಿಂಗಳಿಂದ ಈ ಜಮೀನಿನಲ್ಲಿ ವಾಮಾಚಾರಕ್ಕೆ ಸಂಬಂಧಿಸಿದ ವಸ್ತುಗಳು ಸತತವಾಗಿ ಕಾಣಿಸಿಕೊಳ್ಳುತ್ತಿರುವುದು ಗ್ರಾಮಸ್ಥರಲ್ಲಿ ಆತಂಕವನ್ನುಂಟುಮಾಡಿದೆ.
ಸ್ಥಳೀಯರು ಈ ಘಟನೆಯಿಂದ ಆಘಾತಕ್ಕೊಳಗಾಗಿದ್ದು, ಇದರ ಹಿಂದಿನ ಉದ್ದೇಶವೇನು ಎಂಬುದರ ಬಗ್ಗೆ ಚರ್ಚೆಗಳು ಆರಂಭವಾಗಿವೆ.
ವಿಚ್ಛೇದಿತನ ಜತೆ ಪತ್ನಿ ಅಕ್ರಮ ಸಂಬಂಧ: ಮಕ್ಕಳಿಬ್ಬರನ್ನು ಕೊಂದು ಸ್ವಯಂ ಜೀವ ಕಳೆದುಕೊಂಡ ತಂದೆ