newsics.com
ಕೊಪ್ಪಳ : ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊರ್ವನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಮೃತರನ್ನು ಗವಿಸಿದ್ದಪ್ಪ ಎಂದು ಗುರುತಿಸಲಾಗಿದೆ.
ಕೊಪ್ಪಳ ನಗರದ ನಿವಾಸಿಯಾದ ಗವಿಸಿದ್ದಪ್ಪ ಎಂಬವರನ್ನು ಮೂವರು ಯುವಕರು ನಿರ್ಮಿತಿ ಕೇಂದ್ರ ನಗರದಲ್ಲಿನ ಬಹದ್ದೂರ್ ಬಂಡಿ ಗ್ರಾಮಕ್ಕೆ ಹೋಗುವ ರಸ್ತೆ ಬದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಆರೋಪಿಗಳ ಪೈಕಿ ಓರ್ವ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ಇನ್ನುಳಿದ ಇಬ್ಬರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಆಗಮಿಸಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.
Supreme Court: ‘ನೀವು ನಿಜವಾದ ಭಾರತೀಯ ಆಗಿದ್ದರೆ ಈ ಮಾತು ಹೇಳ್ತಿರಲಿಲ್ಲ; ರಾಹುಲ್ ಗಾಂಧಿಗೆ ಸುಪ್ರೀಂ ತರಾಟೆ!