newsics.com
ಹುಬ್ಬಳ್ಳಿ: ನೇಹಾ ಹತ್ಯೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಂದ ಜಾಮೀನು ನೀಡಲು ನಿರಾಕರಣೆ ಮಾಡಿದರು.
ನೇಹಾ ಹಿರೇಮಠ ಕೊಲೆ ಆರೋಪಿಗೆ ಜೈಲೇ ಗತಿ ಎಂಬಂತಾಗಿದೆ.ಆರೋಪಿ ಫಯಾಜ್, ಜಾಮೀನಿಗಾಗಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಹೇಗೆ ಜಾಮೀನು ನೀಡಲಾಗಿದೆಯೋ ಹಾಗೇ ನನಗೂ ನೀಡಿ ಎಂದು ಬೇಡಿಕೆ ಇಟ್ಟಿದ್ದ. ಇದೀಗ ಈ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಇನ್ನೂ, ನೇಹಾ ಹಿರೇಮಠ ಕೇಸ್ಗೆ ಸಂಬಂಧಿಸಿದಂತೆ ಆಗಸ್ಟ್ 6 ಕ್ಕೆ ವಿಚಾರಣೆ ಮುಂದೂಡಿರು ಕೋರ್ಟ್, ಆಗಸ್ಟ್ 6ರಂದು ಫಯಾಜ್ನನ್ನು ಖುದ್ದು ನ್ಯಾಯಾಲಯದಲ್ಲಿ ಹಾಜರಿರುವಂತೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.
ಏನಿದು ಪ್ರಕರಣ?
ಏ.18ರ ಸಂಜೆ 4:45ರ ಸುಮಾರಿಗೆ ಫಯಾಜ್ ಎಂಬಾತ, ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಬಳಿಕ ಆರೋಪಿ ಕಿಮ್ಸ್ ಆಸ್ಪತ್ರೆಯ ಹಿಂಬದಿ ಅವಿತು ಕುಳಿತಿದ್ದ, ಆತನನ್ನು ಕೂಡಲೇ ಬಂಧಿಸಲಾಗಿತ್ತು.
https://www.newsics.com/2025/08/04/two-people-found-dead-mysteriously-inside-a-parked-car/