newsics.com
ಬೆಂಗಳೂರು: ವೇತನ ಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯ ಮಾಡಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳು ಮಂಗಳವಾರ ಮುಷ್ಕರ ಆರಂಭಿಸಿದ್ದವು.
ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರ ಒಕ್ಕೂಟದ ಮುಖ್ಯಸ್ಥರು ಸಿಎಂ ಸಿದ್ದರಾಮಯ್ಯ ಜೊತೆ ಸಭೆ ಮೇಲೆ ಸಭೆ ನಡೆಸಿದ್ರು ಪ್ರಯೋಜವಾಗಿಲ್ಲ. ಜೊತೆಗೆ ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್ ಸೂಚನೆ ನೀಡಿದ ನಂತರವೂ ಸಾರಿಗೆ ನೌಕರರು ಮಂಗಳವಾರ ಮುಷ್ಕರ ನಡೆಸಿದರು
ಬೆಳಿಗ್ಗೆಯಿಂದಲೇ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಸ್ಗಳಲ್ಲಿದೇ ಪ್ರಯಾಣಿಕರು ಪರದಾಟ ನಡೆಸಿದ್ದರು. ಸದ್ಯ ಕೋರ್ಟ್ ಸೂಚನೆ ಮೇರೆಗೆ ಮುಷ್ಕರ ಮುಂದೂಡಲಾಗಿದೆ.
ಇದರಿಂದ ಗರಂ ಆದ ಹೈಕೋರ್ಟ್, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯನ್ನು ತರಾಟೆಗೆ ತೆಗೆದುಕೊಂಡಿತು. ಮುಷ್ಕರ ನಿಲ್ಲಿಸದಿದ್ದರೇ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು. ಎಸ್ಮಾ ಕಾಯ್ದೆಯಡಿ ಸರ್ಕಾರ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು ಎಂದು ಖಡಕ್ ಎಚ್ಚರಿಕೆ ನೀಡಿತು. ಹೈಕೋರ್ಟ್ ಎಚ್ಚರಿಕೆ ಬೆನ್ನಲ್ಲೇ ಸಾರಿಗೆ ನೌಕರರು ಮುಷ್ಕರವನ್ನು ಮುಂದೂಡಿದ್ದಾರೆ.