newsics.com
ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ (ಆ.5) ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರ ಪರಿಣಾಮ ಬಸ್ ಸಂಚಾರ ಇಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದಾರೆ.
ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಂಡಿದ್ದರೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿಲ್ಲ.
ಸರ್ಕಾರಿ, ಖಾಸಗಿ ಅನುದಾನಿತ ಶಾಲೆ, ಕಾಲೇಜುಗಳಿಗೆ ರಜೆ ಇರುವುದಿಲ್ಲ. ಎಂದಿನಂತೆ ಶಾಲಾ ಕಾಲೇಜುಗಳು ನಡೆಯಲಿದ್ದು, ಬಸ್ಗಳನ್ನು ಆಶ್ರಯಿಸಿರುವ ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳು, ಜನತೆಗೆ ಬಸ್ ಬಂದ್ ಬಿಸಿ ತಟ್ಟಲಿದೆ. ಈಗಾಗಲೇ ಬಹುತೇಕ ಕಡೆ ಬಸ್ ಸಂಚಾರ ಸ್ಥಗಿತವಾಗಿ ತೊಂದರೆಯಾಗಿದೆ. ಸಾರಿಗೆ ನೌಕರರು ಕೆಲಸಕ್ಕೆ ಗೈರು ಹಾಜರಾಗಿರುವುದರಿಂದ ಬಸ್ ಸಂಚಾರ ಸ್ಥಗಿತಗೊಂಡಿದೆ.
Tollywood news ತೆಲುಗು ಸಿನಿಮಾಗಳ ಚಿತ್ರೀಕರಣ ದಿಢೀರ್ ಬಂದ್: ಯಾಕೆ? ಏನಾಯ್ತು?
Viral ಟೈಲ್ಸ್ ಪಾಲಿಶ್ ಮಾಡುವ ಯಂತ್ರ ಬಳಸಿ ಗೆಳೆಯನ ಹಲ್ಲಿನ ಓರೆಕೋರೆ ಸರಿಪಡಿಸಿದ ಸ್ನೇಹಿತ – ವೈರಲ್ ವಿಡಿಯೋ ನೋಡಿ
ಮತ್ತೊಂದು ವಿವಾದ ಸೃಷ್ಟಿಸಿದ ಕಮಲ್ ಹಾಸನ್: ಶಿಕ್ಷಣದ ಬಗ್ಗೆ ನಟ ಹೇಳಿದ್ದೇನು?