newsics.com
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ತೂಗುದೀಪ ಹಾಗೂ ಇನ್ನಿತರ ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆದರೆ ದರ್ಶನ್ ಸೇರಿದಂತೆ ಆರೋಪಿಗಳಿಗೆ ನೀಡಿರುವ ಜಾಮೀನು ರದ್ದು ಮಾಡಬೇಕು ಎಂದು ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ.
ಸರ್ಕಾರ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಲಿಖಿತರೂಪದ ವಾದವೇನು..? ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ರಾಜ್ಯ ಸರಕಾರ ಸಲ್ಲಿಸಿರುವ ವಾದ ಅಂಶಗಳೇನು?
ಹೈಕೋರ್ಟ್ನ ತೀರ್ಪು ತಪ್ಪು ಎಂದು ವಾದಿಸಿರುವ ಸರ್ಕಾರ, ಡಿಎನ್ಎ ಪುರಾವೆಗಳು, ಸಾಕ್ಷಿ ಹೇಳಿಕೆಗಳು ಮತ್ತು ಆರೋಪಿಗಳ ಅಪರಾಧ ಹಿನ್ನೆಲೆಯನ್ನು ಉಲ್ಲೇಖಿಸಿದೆ. ದರ್ಶನ್ ಜಾಮೀನು ರದ್ದು ಮಾಡುವಂತೆ ಸರ್ಕಾರ ಸುಪ್ರೀಂಗೆ ಕೆಲವು ಕಾರಣಗಳನ್ನು ನೀಡಿದೆ.
ಅಪಹರಣದ ಸಮಯದಲ್ಲಿ ಮತ್ತು ಕೊಲೆ ನಡೆದ ಸ್ಥಳದಲ್ಲಿ ಆರೋಪಿಗಳು ಇದ್ದರು ಎಂದು ತಿಳಿದುಬಂದಿದೆ. ಪಟ್ಟಣಗೆರೆಯ ಶೆಡ್ಗೆ ಆರೋಪಿಗಳು, ಮೃತ ವ್ಯಕ್ತಿ ಪ್ರವೇಶಿಸುವುದನ್ನು ಐವರು ಸಾಕ್ಷಿಗಳು ನೋಡಿದ್ದಾರೆ ಎಂದು ಸರ್ಕಾರ ಸುಪ್ರೀಂಗೆ ಸಲ್ಲಿಸಿರುವ ಹೇಳಿಕೆಯಲ್ಲಿ ಉಲ್ಲೇಖಿಸಿದೆ.
ಕೊಲೆ ನಡೆದ ಸ್ಥಳದಿಂದ ಸಂಗ್ರಹಿಸಲಾದ ಮಣ್ಣಿನ ಮಾದರಿ ಮತ್ತು A-2 ದರ್ಶನ್, A-4 ರಾಘವೇಂದ್ರ, A-5 ನಂದೀಶ್ ಮತ್ತು A-11 ನಾಗರಾಜು ಅವರುಗಳ ಪಾದರಕ್ಷೆಗಳಿಂದ ಸಂಗ್ರಹಿಸಲಾದ ಮಣ್ಣಿನ ಮಾದರಿಗಳು ಹೊಂದಾಣಿಕೆಯಾಗುತ್ತವೆ.
DNA ವಿಶ್ಲೇಷಣೆಯಿಂದ ಮೃತ ರೇಣುಕಾಸ್ವಾಮಿ ರಕ್ತದ ಕಲೆಗಳು ಹಲವು ಆರೋಪಿ ಬಟ್ಟೆಗಳ ಮೇಲೆ ಕಂಡುಬಂದಿವೆ. ಕೊಲೆ ನಡೆದ ಸಮಯದಲ್ಲಿ A-1 ಪವಿತ್ರಾ ಗೌಡ ಮತ್ತು A-2 ದರ್ಶನ್ ಇಬ್ಬರೂ ಸಕ್ರಿಯವಾಗಿ ಭಾಗಿಯಾಗಿದ್ದರು, ಹೈಕೋರ್ಟ್ನ ಜಾಮೀನು ನೀಡುವ ತೀರ್ಪು ಸರಿಯಾಗಿಲ್ಲ ಮತ್ತು ದಾಖಲೆಗಳಿಗೆ ವಿರುದ್ಧವಾಗಿದೆ , ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಎಂದು ಹೈಕೋರ್ಟ್ ಹೇಳಿರುವುದು ತಪ್ಪು, ಮೃತನ ಮೇಲಿನ ಗಾಯಗಳು ಇದನ್ನು ಸುಳ್ಳಾಗಿಸುತ್ತವೆ ಎಂದು ಸರ್ಕಾರ ವಾದಿಸಿದೆ.
ಸಾಕ್ಷಿಯಾದ ಪುನೀತ್ ಹೇಳಿಕೆಯನ್ನು ತಡವಾಗಿ ದಾಖಲಿಸಲಾಗಿದೆ ಎಂಬ ಕಾರಣಕ್ಕೆ ಅನುಮಾನಿಸಿರುವುದು ಸರಿಯಲ್ಲ.ಈ ತಡಕ್ಕೆ ಸೂಕ್ತ ಕಾರಣಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ..
ಕೊಲೆ ನಡೆದ ಸಮಯದಲ್ಲಿ A-1 ಪವಿತ್ರಾ ಗೌಡ ಮತ್ತು A-2 ದರ್ಶನ್ ಇಬ್ಬರೂ ಸಕ್ರಿಯವಾಗಿ ಭಾಗಿಯಾಗಿದ್ದರು.ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಎಂದಿದೆ ಹೈಕೋರ್ಟ್ ಮೃತನ ಮೇಲಿನ ಗಾಯಗಳು ಇದನ್ನು ಸುಳ್ಳಾಗಿಸುತ್ತವೆ. ಸಾಕ್ಷಿಯಾದ ಪುನೀತ್ ಹೇಳಿಕೆಯನ್ನು ತಡವಾಗಿ ದಾಖಲಿಸಲಾಗಿದೆ ಎಂಬ ಕಾರಣಕ್ಕೆ ಅನುಮಾನಿಸಿರುವುದು ಸರಿಯಲ್ಲ.ಈ ತಡಕ್ಕೆ ಸೂಕ್ತ ಕಾರಣಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ..
ಪ್ರಕರಣದಲ್ಲಿ ಸೂಕ್ತ ವಿಧಿ ವಿಜ್ಞಾನ, ಎಲೆಕ್ಟ್ರಾನಿಕ್ ಮತ್ತು CDR ಪುರಾವೆಗಳಿವೆ ಎಂದು ಹೈಕೋರ್ಟ್ ಪರಿಗಣಿಸಿಲ್ಲ.ಜಾಮೀನು ವಿಚಾರಣೆಯ ಹಂತದಲ್ಲಿ ಹೈಕೋರ್ಟ್ ‘ಮಿನಿ ಟ್ರಯಲ್’ ನಡೆಸಿದೆ.A-2 ದರ್ಶನ್ ಗೆ ಹಿಂದೆ ಕೂಡ ಅಪರಾಧ ಹಿನ್ನಲೆ ಇದೆ. A-2 ದರ್ಶನ್ ಬೆನ್ನು ನೋವಿನ ಕಾರಣಕ್ಕೆ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದಿದ್ದರು.ಮರುದಿನವೇ ಚಲನಚಿತ್ರ ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ. ಇದಿಷ್ಟು ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ರಾಜ್ಯ ಸರಕಾರ ಸಲ್ಲಿಸಿರುವ ವಾದ ಅಂಶಗಳಾಗಿವೆ.