newsics.com
ಉತ್ತರ ಕನ್ನಡ: ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅನಗೋಡಿನ ಬೆಳ್ತೆರಗದ್ದೆಯಲ್ಲಿ ನಡೆದಿದೆ.
ಲಕ್ಷ್ಮೀ ಮಹಾದೇವ ನಾಗೇಶ ಸಿದ್ಧಿ (48) ಮೃತ ಮಹಿಳೆ.ಕೌಟುಂಬಿಕ ಕಾರಣಗಳಿಗಾಗಿ ಲಕ್ಷ್ಮೀ, ಗಂಡನಿಂದ ಬೇರ್ಪಟ್ಟ ಬಳಿಕ ಏಕಾಂಗಿಯಾಗಿ ವಾಸಿಸುತ್ತಿದ್ದರು. ಆದರೆ, ಆರ್ಥಿಕ ಸಂಕಷ್ಟದಿಂದಾಗಿ ಒಂದು ಹೊತ್ತಿನ ಊಟಕ್ಕೂ ಇತರರನ್ನು ಅವಲಂಬಿಸಬೇಕಾದ ದುಸ್ಥಿತಿ ಎದುರಾಗಿತ್ತು.
ಈ ಕಾರಣದಿಂದ ಮಾನಸಿಕವಾಗಿ ಕುಗ್ಗಿದ್ದ ಲಕ್ಷ್ಮೀ, ತಮ್ಮ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಸಾಯಲು ಯತ್ನಿಸಿದ್ದು, ಆದರೆ ದೇಹವೆಲ್ಲ ಸುಟ್ಟು ನರಳಾಟಕ್ಕೆ ಸ್ಥಳೀಯರು ಸಹಕಾರದಿಂದ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಗಸ್ಟ್ 6 ರಂದು ಮೃತಪಟ್ಟಿದ್ದಾರೆ.ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.