newsics.com
ನವದೆಹಲಿ: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ಅಧಿಸೂಚನೆಯ ಪ್ರಕಾರ, ಆಗಸ್ಟ್ 21 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಗಸ್ಟ್ 22 ರಂದು ದಾಖಲೆಗಳನ್ನು ಪರಿಶೀಲಿಸಲಾಗುವುದು.ಚುನಾವಣಾ ಯುದ್ಧದಿಂದ ಹಿಂದೆ ಸರಿಯಲು ಆಗಸ್ಟ್ 25 ಕೊನೆಯ ದಿನಾಂಕವಾಗಿದೆ.
ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಖರ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಉಪಚುನಾವಣೆ ಪ್ರಕ್ರಿಯೆಯನ್ನು ಚುನಾವಣಾ ಆಯೋಗ ಕೈಗೊಂಡಿದೆ.
1952ರ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ಕಾಯ್ದೆಯ ಪ್ರಕಾರ ಅಧಿಸೂಚನೆ ಹೊರಡಿಸಿದ್ದ ನಂತರ ಚುನಾವಣಾ ಆಯೋಗವು ನಾಮಪತ್ರಗಳ ಪರಿಶೀಲನೆ, ಹಿಂಪಡೆಯುವಿಕೆ, ಮತದಾನ, ಮತ ಎಣಿಕೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಗರಿಷ್ಠ 32 ದಿನಗಳಲ್ಲಿ ಪೂರ್ಣಗೊಳಿಸಬೇಕು.
https://www.newsics.com/2025/08/07/bsc-student-in-love-with-driver/