newsics.com
ಬೆಂಗಳೂರು:ರಾಜ್ಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ತಯಾರಿಯಲ್ಲಿ ಗೃಹಿಣಿಯರು ನಿರತರಾಗಿದ್ದಾರೆ. ಹಬ್ಬ ಸಮೀಸುತ್ತಿದ್ದಂತೆ ಖರ್ಚು ವೆಚ್ಚಗಳು ಅಧಿಕವಾಗಿವೆ. ಹಾಗಂತ ಹಬ್ಬ ಆಚರಣೆ ಮಾಡದೇ ಇರಲು ಸಾಧ್ಯವಿಲ್ಲ. ಈ ವೇಳೆ ರಾಜ್ಯ ಸರ್ಕಾರ ಗೃಹಿಣಿಯರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ.
ನಾಳೆ ಶ್ರಾವಣ ಶುಕ್ರವಾರದ ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಪಾವತಿಯಾಗಲಿದೆ ಎಂದು ಹೇಳಲಾಗಿದೆ.
2025- 26 ನೇ ಸಾಲಿನ ಮೂರನೇ ಕಂತಿನ ಎರಡು ಸಾವಿರ ರೂಪಾಯಿಯನ್ನು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಎರಡು ಮೂರು ದಿನದಲ್ಲಿ ಜಮಾ ಮಾಡಲಾಗುವುದು. ರಾಜ್ಯದ 1.24 ಕೋಟಿ ಮಹಿಳೆಯರ ಖಾತೆಗೆ ಮೂರನೇ ಕಂತಿನ ಹಣ ಜಮಾ ಆಗಲಿದ್ದು, ನಾಲ್ಕು ಮತ್ತು ಐದನೇ ಕಂತಿನ ಹಣ ಬಾಕಿ ಉಳಿಯಲಿದೆ.