Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಹುಲ್ ಆರೋಪ, ಡಿಕೆಶಿಗೆ ಸಂಕಷ್ಟ… ದೂರಿನ ಪ್ರತಿಗೆ ಸಹಿ ಹಾಕಿ ಎಂದ ಚುನಾವಣಾ ಆಯೋಗ!
ದೇಶಕರ್ನಾಟಕ

ರಾಹುಲ್ ಆರೋಪ, ಡಿಕೆಶಿಗೆ ಸಂಕಷ್ಟ… ದೂರಿನ ಪ್ರತಿಗೆ ಸಹಿ ಹಾಕಿ ಎಂದ ಚುನಾವಣಾ ಆಯೋಗ!

Share
2 Min Read
SHARE

newsics.com

ಬೆಂಗಳೂರು:ಮಹದೇವಪುರ ವಿಧಾನಸಭೆ ಕ್ಷೇತ್ರ ಸೇರಿದಂತೆ ರಾಜ್ಯದ ನಾನಾ ಕಡೆ ಚುನಾವಣೆ ಆಯೋಗದಿಂದಲೇ ಮತ ಅಕ್ರಮ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ರಾಜ್ಯ ಚುನಾವಣೆ ಆಯೋಗದ ಕಚೇರಿಗೆ ತೆರಳಿ ದೂರು ನೀಡಿದರು.  ದೂರಿಗೆ ಪ್ರತಿಕ್ರಿಯಿಸಿರುವ ಚುನಾವಣಾಧಿಕಾರಿ ಕರ್ನಾಟಕದ ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಲ್ಲಿಸಿದ ದೂರನ್ನು ಬೆಂಬಲಿಸುವ ಯಾವುದೇ ದಾಖಲೆಗಳನ್ನು ಸಲ್ಲಿಸಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಡಿಕ್ಲರೇಷನ್​ಗೆ ಸಹಿ ಮಾಡುವಂತೆಯೂ ಅವರು ಸೂಚಿಸಿದ್ದಾರೆ

 

ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿರುವುದನ್ನು ವಿರೋಧಿಸಿ ಜಾಥಾ ನಡೆಸಿದ್ದರು..ಮೊದಲಿಗೆ ರಾಹುಲ್ ಗಾಂಧಿನೇ ನಿಯೋಗದಲ್ಲಿ ತೆರಳಿ ದೂರು ನೀಡಲು ಉದ್ದೇಶಿಸಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಬದಲಾವಣೆ ಹಿನ್ನೆಲೆ ರಾಹುಲ್ ಗಾಂಧಿ ದೂರು ಕೊಡಲು ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ತೆರಳಲಿಲ್ಲ.

ಮುಖ್ಯ ಚುನಾವಣಾಧಿಕಾರಿ ನಿನ್ನೆ ರಾಹುಲ್​ ಗಾಂಧಿಗೆ ಪತ್ರ ಬರೆದು ಮತಗಳ್ಳತನದ ಬಗ್ಗೆ ಮಾಹಿತಿಯೊಂದಿಗೆ ಅಫಿಡವಿಟ್​ ನೀಡುವಂತೆ ಸೂಚಿಸಿತ್ತು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಡಿಸಿಎಂ ಡಿಕೆ ಶಿವಕುಮಾರ್, ಮತ ಕಳ್ಳತನ ಅಗುತ್ತಿರುವುದನ್ನು ಜನಸಾಮಾನ್ಯರಿಗೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಅಕ್ರಮ ನಡೆದಿರುವುದನ್ನು ಕಾಂಗ್ರೆಸ್ ಪಕ್ಷದ ರೀಸರ್ಚ್​ ತಂಡ ವಿಸ್ತೃತವಾಗಿ ಪರಿಶೀಲನೆ ನಡೆಸಿದ ಬಳಿಕ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಚುನಾವಣೆಯಲ್ಲಿ ಅಕ್ರಮ ನಡೆದಿರುವುದಕ್ಕೆ ಸಾಕಷ್ಟು ಪುರಾವೆಗಳನ್ನು ಅಯೋಗಕ್ಕೆ ಸಲ್ಲಿಸಿದ್ದೇವೆ. ಆದರೆ ಸಮಗ್ರ ವಿವರಣೆಯನ್ನು ಸಲ್ಲಿಸಿಲ್ಲ, ನಮ್ಮ ರೀಸರ್ಚ್​ ಇನ್ನೂ ಮುಗಿದಿಲ್ಲ, ಇನ್ನೂ ಮಾಹಿತಿ

ದೂರಿನ ಪ್ರತಿಯಲ್ಲೇನಿದೆ?

ಡಿಕೆ ಶಿವಕುಮಾರ್ ಅವರು ನೀಡಿದ ದೂರಿಗೆ ಮತ್ತು ಮಾಡಿದ ಆರೋಪಕ್ಕೆ ಸೂಕ್ತ ಸಾಕ್ಷಿ ನೀಡುವಂತೆ ಚುನಾವಣಾಧಿಕಾರಿ ಕೋರಿದ್ದಾರೆ. ಹಾಗೇ, ಡಿಕ್ಲರೇಷನ್​ ಗೆ ಸಹಿ ಹಾಕುವಂತೆ ಆದೇಶಿಸಿದ್ದಾರೆ. ಈ ಡಿಕ್ಲರೇಷನ್ ಅಥವಾ ಘೋಷಣಾ ಪತ್ರದಲ್ಲಿ ಕಾನೂನು ಅಂಶಗಳ ಬಗ್ಗೆ ಉಲ್ಲೇಖಿಸಲಾಗಿದೆ. ಚುನಾವಣಾ ಪಟ್ಟಿ ತಿದ್ದುಪಡಿ, ಸಿದ್ದತೆ ಅಥವಾ ಶುದ್ಧೀಕರಣ ಸಂಬಂಧ ನೀಡುವ ತಪ್ಪು ಘೋಷಣೆ ಶಿಕ್ಷಾರ್ಹವಾಗಿದೆ. 1950ರ ಪ್ರಜಾಪ್ರಭುತ್ವ ಪ್ರತಿನಿಧಿ ಕಾಯ್ದೆ ಕಲಂ 31ರಂತೆ ಗರಿಷ್ಠ ಒಂದು ವರ್ಷದವರೆಗೆ ಜೈಲುಶಿಕ್ಷೆ ವಿಧಿಸಬಹುದು. ದಂಡ ಅಥವಾ ಎರಡೂ ವಿಧಿಸಬಹುದು ಎಂದು ಅರಿತಿದ್ದೇನೆ ಎಂದು ಘೋಷಣಾ ಪತ್ರಕ್ಕೆ ಸಹಿ ಹಾಕಬೇಕು.

 

https://www.newsics.com/2025/08/09/gang-rape-of-mentally-retarded-young-woman-video-made-and-circulated-by-miscreants/

TAGGED:#Rahul #accusations #DKSH #ElectionCommission #complaint #Congress
Share This Article
Facebook Twitter Copy Link Print
Previous Article ಬುದ್ಧಿಮಾಂದ್ಯ ಯುವತಿ ಮೇಲೆ ಗ್ಯಾಂಗ್‌*ರೇಪ್‌ – ವಿಡಿಯೋ ಮಾಡಿ ಹರಿಬಿಟ್ಟ ದುರುಳರು
Next Article ದೆಹಲಿಯಲ್ಲಿ ಭಾರೀ‌ ಮಳೆ, ವಿಮಾನ ಸಂಚಾರದಲ್ಲಿ ವ್ಯತ್ಯಯ, ಜನಜೀವನ ಅಸ್ತವ್ಯಸ್ತ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?