Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್ : ಎಸ್ಐಟಿಗೆ ಪೊಲೀಸ್ ಠಾಣೆ ಅಧಿಕಾರ ನೀಡಿದ ರಾಜ್ಯ ಸರ್ಕಾರ
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ : ಎಸ್ಐಟಿಗೆ ಪೊಲೀಸ್ ಠಾಣೆ ಅಧಿಕಾರ ನೀಡಿದ ರಾಜ್ಯ ಸರ್ಕಾರ

Share
1 Min Read
SHARE

ಧರ್ಮಸ್ಥಳ :  ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಅನ್ನೋ ಆರೋಪದಡಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ ತನಿಖೆಗೆ ಆದೇಶ ನೀಡಿತ್ತು. ಇದರಂತೆ ಎಸ್ಐಟಿ ತೀವ್ರ ತನಿಖೆ ನಡೆಸುತ್ತಿದೆ. ಮುಸುಕುದಾರಿ ದೂರುದಾರನ ಗಂಭೀರ ಆರೋಪದ ಕುರಿತು ತನಿಖೆ ನಡೆಸುತ್ತಿರುವ ತನಿಖಾ ತಂಡ ಹಲೆವೆಡೆ ಉತ್ಖನನ ಮಾಡಿದೆ. ಇದೀಗ ತನಿಖೆ ನಡೆಸುತ್ತಿರುವ ಎಸ್ಐಟಿಗೆ  ರಾಜ್ಯ ಸರ್ಕಾರ ಪೊಲೀಸ್ ಠಾಣೆ ಎಂದು ಅಧಿಸೂಚನೆ ಹೊರಡಿಸಿದೆ.

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪದಡಿ ತನಿಖೆಗೆ ರಚನೆಯಾಗಿದ್ದ ಎಸ್ಐಟಿಗೆ ಪೊಲೀಸ್​ ಠಾಣೆ ಮಾನ್ಯತೆಯನ್ನ ಸರ್ಕಾರ ನೀಡಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್​ಎಸ್​​ಎಸ್​) ಕಲಂ 2 (1)(ಯು) ಅಡಿಯಲ್ಲಿ ನೀಡಿರುವ ಅಧಿಕಾರವನ್ನು ಚಲಾಯಿಸಿದ ಸರ್ಕಾರದ ಆದೇಶದಂತೆ 2025 ಜುಲೈ 19 ರಂದು ರಚನೆ ಮಾಡಲಾದ ಎಸ್​ಐಟಿಯನ್ನು ಪೊಲೀಸ್ ಠಾಣೆ ಎಂದು ಅನೌನ್ಸ್ ಮಾಡಲಾಗಿದೆ.

 

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಅನ್ನೋ ಆರೋಪದಡಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ ತನಿಖೆಗೆ ಆದೇಶ ನೀಡಿತ್ತು. ಇದರಂತೆ ಎಸ್ಐಟಿ ಧರ್ಮಸ್ಥಳದ ಸುತ್ತ ಮುತ್ತಲಿನ ಕಾಡಿನಲ್ಲಿ ತನಿಖೆ ನಡೆಸುತ್ತಿದೆ. ಇದರ ನಡುವೆ ಬರುಡೆಗಾಗಿ ಉತ್ಖನನ ಕಾರ್ಯಾಚರಣೆ ವೇಳೆ ಬಂಗ್ಲಗುಡ್ಡೆ ಕಾಡಿನಲ್ಲಿ ಅಸ್ಥಿಪಂಜರವೊಂದು ಪತ್ತೆಯಾಗಿತ್ತು. ಮುಸುಕುದಾರಿ ದೂರುದಾರ ಗುರುತಿಸದೇ ಇದ್ದ ಸ್ಥಳದಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿತ್ತು. ಶವಗಳ ಪ್ರಕರಣ ಸಂಬಂಧ ಮತ್ತೊಬ್ಬರ ದೂರುದಾರ ಜಯನ್ ಬಾಲಕಿ ಮೃತದೇಹ ಹೂತುಹಾಕಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಮೇಲಿಂದ ಮೇಲೆ ಧರ್ಮಸ್ಥಳ ಪ್ರಕರಣದಲ್ಲಿ ಆರೋಪಗಳು, ದೂರುಗಳು ದಾಖಲಾಗುತ್ತಿರುವ ಸಂಬಂಧ ಇದೀಗ ರಾಜ್ಯ ಸರ್ಕಾರ ಎಸ್ಐಟಿಗೆ ವಿಶೇಷ ಅಧಿಕಾರ ನೀಡಿದೆ. ಎಸ್ಐಟಿಗೆ ಸ್ವತಂತ್ರವಾಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ರಾಜ್ಯ ಸರ್ಕಾರ ಅಧಿಕಾರ ನೀಡಿದೆ.

 

ಎಸ್​ಐಟಿಗೆ ನೇಮಕ ಮಾಡಲಾದ ಪೊಲೀಸ್ ನಿರೀಕ್ಷಕರ ದರ್ಜೆಯ/ಮೇಲ್ಪಟ್ಟ ದರ್ಜೆಯ ಅಧಿಕಾರಿಯನ್ನು ಬಿಎನ್​ಎಸ್​​ಎಸ್ ಅಡಿ ಠಾಣಾ ಅಧಿಕಾರಿ ಎಂದು ಘೋಷಣೆ ಮಾಡಲಾಗಿದೆ. ಎಸ್​ಐಟಿ ಬಿಎನ್​ಎಸ್​​ಎಸ್ ಅಡಿ ತನಿಖಾ ಕ್ರಮಗಳನ್ನು ಅನುಸರಿಸಿ ರಚಿಸಿರುವ ಸಂಬಂಧಪಟ್ಟ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಕೆ ಮಾಡುವಂತಹ ಅಧಿಕಾರವನ್ನು ಸರ್ಕಾರ ನೀಡಿದೆ.

TAGGED:#Stategovernment #policestation #authority #SIT #dharmastalacase
Share This Article
Facebook Twitter Copy Link Print
Previous Article Helath tips ಖಾಲಿ ಹೊಟ್ಟೆಯಲ್ಲಿ ಟೊಮೆಟೋವನ್ನು ತಿಂದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ
Next Article ಬುದ್ಧಿಮಾಂದ್ಯ ಯುವತಿ ಮೇಲೆ ಗ್ಯಾಂಗ್‌*ರೇಪ್‌ – ವಿಡಿಯೋ ಮಾಡಿ ಹರಿಬಿಟ್ಟ ದುರುಳರು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?