ಬೆಂಗಳೂರಲ್ಲಿಂದು ಮೋದಿ ಹವಾ, ಪ್ರಧಾನಿ ಜತೆ ಸಿಎಂ ಡಿಸಿಎಂ, ಡಿಕೆ ಆಪ್ತ ಮಾತು

newsics.com ಬೆಂಗಳೂರು: ಪ್ರಧಾನಿ ಮೋದಿ ಭಾನುವಾರ ನಾಲ್ಕು ಗಂಟೆಗಳ ಅವಧಿಯಲ್ಲಿ ಮೂರು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸಿದರು. ಬಳಿಕ ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಿದರು. ಮೆಟ್ರೋ ಮೂರನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಅಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಬ್ಬರೂ ಪ್ರಧಾನಿ ಮೋದಿಯವರ ಜತೆಗೇ ಇದ್ದರು. ಐಐಐಟಿ ಆಡಿಟೋರಿಯಂನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರು … Continue reading ಬೆಂಗಳೂರಲ್ಲಿಂದು ಮೋದಿ ಹವಾ, ಪ್ರಧಾನಿ ಜತೆ ಸಿಎಂ ಡಿಸಿಎಂ, ಡಿಕೆ ಆಪ್ತ ಮಾತು