newsics.com
ಉತ್ತರ ಪ್ರದೇಶ: ಯುವಕನೊಬ್ಬನನ್ನು ಮನೆಗೆ ಕರೆಸಿಕೊಂಡ ದಂಪತಿ ಆತನನ್ನು ಸ್ಕ್ರೂಡ್ರೈವರ್, ಪ್ಲೈಯರ್ಗಳಿಂದ ಚುಚ್ಚಿ ಕೊಂದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸಂಭಾಲ್ನಲ್ಲಿ ನಡೆದಿದೆ.
ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಯುವಕ ಮೃತಪಟ್ಟಿದ್ದ. ಅನೀಸ್ ಎಂಬಾತನೇ ಕೊಲೆಯಾದವ. ರಯೀಸ್ ಅಹ್ಮದ್ ಮತ್ತು ಆತನ ಪತ್ನಿ ಸಿತಾರಾ ತನ್ನನ್ನು ಕೊಂದರು ಎಂದು ಅನೀಸ್ ಸಾಯುವ ಮುನ್ನ ಹೇಳಿದ್ದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
₹7 ಲಕ್ಷ ಸಾಲದ ವಿಚಾರಕ್ಕೆ ಅನೀಸ್ನನ್ನು ಕೊಲ್ಲಲಾಗಿದೆ ಎಂದು ಕುಟುಂಬ ಹೇಳಿಕೆ ನೀಡಿದೆಯಾದಾರೂ, ಪೊಲೀಸರ ಪ್ರಕಾರ, ಅನೀಸ್ ಕೊಲೆಯಾಗಲು ಅಕ್ರಮ ಸಂಬಂಧವೇ ಕಾರಣ ಎಂದಿದ್ದಾರೆ. ಕೈಕಾಲು ಮುರಿದು ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಎಂದು ತಂದೆ ಮುಸ್ತಕೀಮ್ ಹೇಳಿದ್ದಾರೆ.
ಅನೀಸ್ನ ಮದುವೆ ನಿಶ್ಚಯವಾಗಿತ್ತು. ವರ್ಷಗಳ ಹಿಂದೆ ಸಾಲ ಕೊಟ್ಟಿದ್ದ ₹7 ಲಕ್ಷ ಕೇಳಲು ನೆರೆಮನೆಗೆ ಹೋಗಿದ್ದ ಎಂದೂ ಮುಸ್ತಕೀಮ್ ತಿಳಿಸಿದ್ದಾರೆ.
ಶನಿವಾರ ರಾತ್ರಿ ತಡವಾಗಿ ಅನೀಸ್ ಸಾವನ್ನಪ್ಪಿದ ಬಗ್ಗೆ ಮಾಹಿತಿ ಬಂದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ.
ವಿಚಾರಣೆ ವೇಳೆ ಅನೀಸ್ ಮತ್ತು ಸಿತಾರಾ ನಡುವೆ ಅಕ್ರಮ ಸಂಬಂಧ ಇದ್ದದ್ದು ಬೆಳಕಿಗೆ ಬಂದಿದೆ. ರಯೀಸ್ ಮತ್ತು ಸಿತಾರಾ ಅನೀಸ್ನನ್ನು ಕೊಲ್ಲಲು ಪ್ಲ್ಯಾನ್ ಮಾಡಿದ್ದರು. ಮನೆಗೆ ಕರೆಸಿ ಕೊಲೆ ಮಾಡಿದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಈ ಕೊಲೆಯಲ್ಲಿ ಸಿತಾರಾ ಭಾಗಿಯಾಗಲು ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.
War 2 shock ಬಿಡುಗಡೆಗೆ ಮುನ್ನವೇ ವಾರ್ 2 ಶಾಕ್: ಕಿಯಾರಾ ಬಿಕಿನಿ ದೃಶ್ಯಕ್ಕೆ ಕೊಕ್!
Health tips ಮುಟ್ಟು ನಿಲ್ಲುವ ವೇಳೆ ಕೂದಲು ಉದುರುತ್ತಾ? ಹಾಗಿದ್ರೆ ಜಸ್ಟ್ ಈ ರೀತಿ ಟ್ರೈ ಮಾಡಿ