newsics.com
ಚಾಮರಾಜನಗರ: ಬಂಡೀಪುರದಲ್ಲಿ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನೊಬ್ಬನನ್ನು ಕಾಡಾನೆಯೊಂದು ಅಟ್ಟಾಡಿಸಿಕೊಂಡು ಹೋಗಿ ತುಳಿದ ಘಟನೆ ನಡೆದಿದ್ದು, ಭಯಾನಕ ದೃಶ್ಯದ ವಿಡಿಯೋ ವೈರಲ್ ಆಗಿದೆ.
ಕರ್ನಾಟಕದ ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಕೇರಳದ ಪ್ರವಾಸಿಗನೊಬ್ಬ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಕಾಡಾನೆ ಮುಂದೆ ಹೋಗಿದ್ದಾನೆ.
ಈ ವೇಳೆ ಕಾಡಾನೆ ದಾಳಿ ನಡೆಸಿದ್ದು, ಆನೆ ಆತನನ್ನು ನೆಲಕ್ಕೆ ತಳ್ಳಿದೆ. ಆನೆಯ ಕಾಲಿನ ಕೆಳಗೆ ಆತ ಸಿಲುಕಿಕೊಂಡಿದ್ದಾನೆ. ಆದರೆ ಆನೆ ನಿಧಾನವಾಗಿ ಆತನ ಮೇಲೆ ಕಾಲು ಇರಿಸಿದ್ದು, ಅದೃಷ್ಟವಶಾತ್ ಪ್ರವಾಸಿಗ ಸಾವಿನ ದವಡೆಯಿಂದ ಪಾರಾಗಿದ್ದಾನೆ.
ವಾಹನಗಳು ಮತ್ತು ಜನರಿಂದ ತುಂಬಿದ್ದ ರಸ್ತೆಯಲ್ಲಿ ನಿಂತಿದ್ದ ಆನೆ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರವಾಸಿಗರ ಮೇಲೆ ಇದ್ದಕ್ಕಿದ್ದಂತೆ ಆನೆ ದಾಳಿ ನಡೆಸಿದೆ. ಕಾಡು ಆನೆಯನ್ನು ಕಂಡ ಆ ವ್ಯಕ್ತಿ ಪ್ರಾಣ ಉಳಿಸಿಕೊಳ್ಳಲು ಓಡಿದರೂ ಆನೆ ಕೂಡ ಓಡಿ ಬಳಿಕ ಆತನನ್ನು ಬೀಳಿಸಿ ತುಳಿದಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ.
https://x.com/gautyou/status/1954740165907542166?t=eewlwk0IejHccodPINDSuw&s=19
Gen Z ಉದ್ಯೋಗಿಗಳಂದ್ರೆ ಕಂಪನಿಗಳೇ ಬೆಚ್ಚಿಬೀಳ್ತಿವೆಯಂತೆ! ವಿಡಿಯೋದಲ್ಲಿ ಹುಡುಗಿ ಹೇಳಿದ್ದೇನು?
Coolie Cinema ರಜನಿ ಮೇನಿಯಾ… ಕೂಲಿ ಸಿನಿಮಾ ಪ್ರತಿ ಟಿಕೆಟ್ಗೆ 2 ಸಾವಿರ ರೂಪಾಯಿ!