newsics.com
ತುಮಕೂರು: ಸಚಿವ ಸ್ಥಾನದಿಂದ ಕೆ.ಎನ್. ರಾಜಣ್ಣ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಮಧುಗಿರಿ ಬಂದ್ ಗೆ ಅಭಿಮಾನಿಗಳು ಕರೆ ಕೊಟ್ಟಿದ್ದಾರೆ.
ಹೌದು, ಮಧುಗಿರಿ ತಾಲೂಕನ್ನು ಮಧ್ಯಾಹ್ನ 1 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂದ್ ಮಾಡಲು ಕೆ.ಎನ್ ರಾಜಣ್ಣ ಬೆಂಬಲಿಗರು ನಿರ್ಧರಿಸಿದ್ದಾರೆ. ಸದ್ಯ ಮಧುಗಿರಿ ಪಟ್ಟಣದಲ್ಲಿ ಕೆ.ಎನ್. ರಾಜಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಕೆಲವರು ಪೆಟ್ರೋಲ್ ಸುರಿದುಕೊಂಡಿದ್ದಾರೆ.
ರಸ್ತೆಯ ಮೇಲೆ ಅರೆಬೆತ್ತಲೆ ಆಗಿ ಪ್ರತಿಭಟನೆ ನಡೆಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಎಂದು ಇದೀಗ ಪ್ರತಿಭಟನೆ ಬೇರೆ ಸ್ವರೂಪ ಪಡೆದುಕೊಂಡಿದೆ. ಪ್ರಮುಖ ರಸ್ತೆಗಳಲ್ಲಿರುವ ಅಂಗಡಿ ಮುಗ್ಗಟ್ಟುಗಳನ್ನು ಒತ್ತಾಯಪೂರ್ವಕವಾಗಿ ಬಂದ್ ಮಾಡುತ್ತಿದ್ದಾರೆ.
ಪರೀಕ್ಷೆಯಲ್ಲಿ ಫೇಲ್ ಆಗಿ ಮನೆ ಬಿಟ್ಟು ಓಡಿ ಬಂದ ಅಪ್ರಾಪ್ತೆ : 200 ಕ್ಕೂ ಹೆಚ್ಚು ಮಂದಿಯಿಂದ ರೇಪ್